Connect with us

Dvgsuddi Kannada | online news portal | Kannada news online

ದಾವಣಗೆರೆ: ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಭೂಮಿ ಕಬಳಿಸುವ ಯತ್ನ; ಬಿಜೆಪಿ ಜನಜಾಗೃತಿ ಆಂದೋಲನ

davangere bjp 4

ದಾವಣಗೆರೆ

ದಾವಣಗೆರೆ: ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಭೂಮಿ ಕಬಳಿಸುವ ಯತ್ನ; ಬಿಜೆಪಿ ಜನಜಾಗೃತಿ ಆಂದೋಲನ

ದಾವಣಗೆರೆ: ರಾಜ್ಯದ ರೈತರ ಕೃಷಿ ಭೂಮಿ, ಮಠ, ಮಂದಿರ, ಜನ ಸಾಮಾನ್ಯರ ಜಮೀನುಗಳನ್ನು ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಅಕ್ರವಾಗಿ ಕಬಳಿಸುವ ಷಡ್ಯಂತ್ರದ ಜನವಿರೋಧಿ ನೀತಿ ವಿರುದ್ಧ ನಮ್ಮ ಭೂಮಿ ನಮ್ಮ ಹಕ್ಕು ಎಂಬ ಹಕ್ಕೊತ್ತಾಯದೊಂದಿಗೆ ಇಂದು (ನ.22) ಜಿಲ್ಲಾ ಬಿಜೆಪಿ ಮಹಾನಗರ ಪಾಲಿಕೆ ಎದುರು ಜನಜಾಗೃತಿ ಆಂದೋಲನ ನಡೆಸಿತು.

ವಕ್ಫ್ ಆಸ್ತಿ ರಾಜ್ಯದಲ್ಲಿ ದೊಡ್ಡ ಸಮಸ್ಯೆ ಸೃಷ್ಠಿಸಿದೆ. ಕಾಂಗ್ರೆಸ್ ಸರ್ಕಾರದ ಒಂದು ಸಮುದಾಯದ ತುಷ್ಟೀಕರಣ ಫಲವಾಗಿ ಸಾವಿರಾರು ಸಂಖ್ಯೆಯ ರೈತರು, ಮಠಾಧೀಶರು, ಸ್ವಾಮೀಜಿ, ನಾಗರಿಕರು ಇದು ನಮ್ಮ ಭೂಮಿ ಎಂದು ಬೀದಿಗಿಳಿದು ಹೋರಾಟ ಮಾಡಬೇಕಾದ ವಾತಾವರಣ ಸೃಷ್ಟಿಸಿದೆ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಲ್ಯಾಂಡ್ ಜಿಹಾದ್ ಮೂಲಕ ಹಿಂದೂ ಸಮಾಜದ ಆಸ್ತಿಗಳನ್ನು ಕಬಳಿಸುವ ಹುನ್ನಾರ ನಡೆಸಿರುವ ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ‌. ಪ್ರತಿ ದಿನ‌ ಹಗರಣ, ಭ್ರಷ್ಟಾಚಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ವಕ್ಫ್ ಕಾಯ್ದೆ ಮುಂದಿಟ್ಟು ರಾತ್ರೋರಾತ್ರಿ ಆಸ್ತಿಗಳನ್ನು ವಕ್ಫ್ ಮಂಡಳಿ ಆಸ್ತಿಯನ್ನಾಗಿ ಮಾಡುತ್ತಿದೆ ಎಂದು ಆರೋಪಸಿದರು.

ಪಹಣಿಯ ಕಾಲಂ 11ರಲ್ಲಿ ರದ್ದುಪಡಿಸಿ:ಸರ್ಕಾರ ವಕ್ಫ್ ನೋಟಿಸ್ ರದ್ದು ಪಡಿಸುವುದಾಗಿ ಹೇಳುತ್ತಿದೆ. ನೋಟಿಸ್ ರದ್ದುಗೊಳಿಸುವ ಜೊತೆಗೆ ಪಹಣಿ ಕಾಲಂ 11 ರಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದನ್ನೂ ತೆಗೆದು ಹಾಕುವ ಕೆಲಸ ಮಾಡಬೇಕು.ಈಗ ಸಾಂಕೇತಿಕವಾಗಿ ಹೋರಾಟ ನಡೆಸಲಾಗುತ್ತಿದೆ. ಸರ್ಕಾರ ವಕ್ಫ್ ಸಮಸ್ಯೆಗೆ ಶಾಶ್ವತವಾದ ಪರಿಹಾರ ಕೊಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಆವರಗೊಳ್ಳ ಪುರವರ್ಗಮಠದ ಸ್ವಾಮೀಜಿಗಳಾದ ಶ್ರೀ ಓಂಕಾರ ಶಿವಾಚಾರ್ಯ ಸ್ವಶಮೀಜಿ, ಪುಣ್ಯಕೋಟಿ ಮಠದ ಶ್ರೀ ಜಗದೀಶ್ವರ ಸ್ವಾಮೀಜಿ, ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಮಾಜಿ ಸಚಿವ ಎಸ್. ಎ. ರವೀಂದ್ರನಾಥ್, ಮಾಜಿ ಮುಖ್ಯ ಸಚೇತಕರಾದ ಡಾ. ಶಿವಯೋಗಿ ಸ್ವಾಮಿ, ಮಾಜಿ ಸಚಿವ ರೇಣುಕಾಚಾರ್ಯ ,ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ , ಮಾಜಿ ಶಾಸಕ ಪ್ರೊ. ನಿಂಗಣ್ಣ , ಬಸವರಾಜ್ ನಾಯ್ಕ್ , ಲೋಕಸಭಾ ಪರಾಜಿತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ , ಯುವ ಮುಖಂಡರಾದ ಮಾಡಾಳ್ ಮಲ್ಲಿಕಾರ್ಜುನ್ , ಶ್ರೀ ಚಂದ್ರಶೇಖರ್ ಪೂಜಾರ್ ಮಾಜಿ ಮೇಯರ್ ಬಿ. ಜಿ. ಅಜಯ್ ಕುಮಾರ್ ,‌ಲೋಕಿಕೆರೆ ನಾಗರಾಜ್ , ರಾಜ್ಯ ಪದಾಧಿಕಾರಿಗಳು, ರೈತ ಮುಖಂಡರು, ಕಾರ್ಯಕರ್ತರು, ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top