ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಬಿಪಿಎಲ್ ಕಾರ್ಡ್ ಮಾನದಂಡ ಪರಿಶೀಲಿಸಲು ಸಮಿತಿಯನ್ನು ರಚಿಸಿಲಾಗಿದೆ.
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಈ ಬಗ್ಗೆ ಮಾಹಿತಿ ನೀಡಿದ್ದು, ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್ ಪಡಿತರ ಚೀಟಿ ಮಾನದಂಡಗಳ ಜೊತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ, ಸಲಹೆಗಳನ್ನು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.



