Connect with us

Dvgsuddi Kannada | online news portal | Kannada news online

ಬಜೆಟ್: ದಾವಣಗೆರೆ ಜಿಲ್ಲೆಯಿಂದ ಏನು ಪ್ರಸ್ತಾವನೆ ಸಲ್ಲಿಸಲಾಗಿದೆ ಗೊತ್ತಾ..?

ದಾವಣಗೆರೆ

ಬಜೆಟ್: ದಾವಣಗೆರೆ ಜಿಲ್ಲೆಯಿಂದ ಏನು ಪ್ರಸ್ತಾವನೆ ಸಲ್ಲಿಸಲಾಗಿದೆ ಗೊತ್ತಾ..?

ದಾವಣಗೆರೆ:  ದಾವಣಗೆರೆ ಜಿಲ್ಲೆಗೆ ಈ ಬಾರಿಯ ಬಜೆಟ್ ನಲ್ಲಿ ಏನು ಸಿಗಲಿದೆ..? ಈ ಬಗ್ಗೆ ನಮ್ಮ ಜಿಲ್ಲೆಯ ಪ್ರತಿನಿಧಿಗಳು ಸಿಎಂಗೆ ಏನು ಬೇಡಿಕೆ ಇಟ್ಟಿದ್ದಾರೆ ಎಂಬುದನ್ನು ಸಂಕ್ಷಿಪ್ತ ವಿವರ ಇಲ್ಲಿದೆ ನೋಡಿ…

ಈ ಬಗ್ಗೆ ಜಿಲ್ಲೆಯ ಬಿಜೆಪಿ ಆರು ಶಾಸಕರು, ಸಂಸದ ಜಿ.ಎಂ. ಸಿದ್ದೇಶ್ವರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಜಿಲ್ಲೆಗೆ ಬಜೆಟ್ ನಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಂಸದ ಜಿ.ಎಂ ಸಿದ್ದೇಶ್ವರ್, ದಾವಣಗೆರೆ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜ್ ನಿರ್ಮಾಣ ಮಾಡಬೇಕು. ಕತ್ತಲಗೆರೆ ಕೃಷಿ ಕೇಂದ್ರವನ್ನು ಅಗ್ರಿಕಲ್ಚರ್ ಕಾಲೇಜ್ ಆಗಿ ಮಾರ್ಪಡು ಮಾಡಬೇಕು. ದಾವಣಗೆರೆ ಜಿಲ್ಲೆಗೆ ಕೆಎಂಎಫ್ ನ  ಶಿವಮೊಗ್ಗ ಹಾಲು ಒಕ್ಕೂಡಟದಿಂದ ಬೇರ್ಪಡಿಸಿ, ಪ್ರತ್ಯೇಕ ಒಕ್ಕೂಟ ಮಾಡಬೇಕು ಎಂಬುದನ್ನು  ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ . ಈ ನಮ್ಮ ಬೇಡಿಕೆಯಲ್ಲಿ ಸಿಎಂ ಯಾವುದನ್ನು ಪರಿಗಣಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top