Connect with us

Dvgsuddi Kannada | online news portal | Kannada news online

ದಾವಣಗೆರೆ; ತಪ್ಪಿದ ಭಾರೀ ದೊಡ್ಡ ಅನಾಹುತ; ಅಪಘಾತದಲ್ಲಿ ಕೆರೆಗೆ ಉರುಳಬೇಕಿದ್ದ ಬಸ್ ಬಚಾವ್ ಮಾಡಿದ ಚಾಲಕ..!

IMG 20230723 213624

ದಾವಣಗೆರೆ

ದಾವಣಗೆರೆ; ತಪ್ಪಿದ ಭಾರೀ ದೊಡ್ಡ ಅನಾಹುತ; ಅಪಘಾತದಲ್ಲಿ ಕೆರೆಗೆ ಉರುಳಬೇಕಿದ್ದ ಬಸ್ ಬಚಾವ್ ಮಾಡಿದ ಚಾಲಕ..!

ದಾವಣಗೆರೆ; ರಸ್ತೆ ಅಪಘಾತವೊಂದರಲ್ಲಿ ಕೆರೆಗೆ ಉರುಳಬೇಕಿದ್ದ ಬಸ್ ಜಸ್ಟ್ ಮಿಸ್ ಆಗಿದ್ದು, ಚಾಲಕನ ಚಾಣಾಕ್ಷತನದಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ದಾವಣಗೆರೆ ತಾಲೂಕಿನ ಕೊಡಗನೂರ ಕೆರೆ ಏರಿಯ ಬಳಿ ಖಾಸಗಿ ಬಸ್ ಹಾಗೂ ಬುಲೆರೋ ವಾಹನ ಡಿಕ್ಕಿಯಾಗಿದೆ. ಈ ವೇಳೆ ಬಸ್ ಕೆರೆ ಕಡೆ ವಾಲಿದ್ದು, ತಕ್ಷಣ ಚಾಲಕ ಬಸ್ ನಿಯಂತ್ರಿಸಿ‌ ನಿಲ್ಲಿಸಿದ್ದಾನೆ. ಒಂದು ವೇಳೆ ಬಸ್ ಕೆರೆಗೆ ಉರುಳಿದ್ರೆ ದೊಡ್ಡ ಅನಾಹುತ ಆಗುತ್ತಿತ್ತು.ಬಸ್ ಚಾಲಕನ ಚಾಣಾಕ್ಷತನದಿಂದ ದೊಡ್ಡ ಅಪಘಾತ ತಪ್ಪಿದಂತಾಗಿದೆ. ದಾವಣಗೆರೆಯಿಂದ ಹೊಸದುರ್ಗಕ್ಕೆ ಖಾಸಗಿ ಬಸ್ ಹೋಗುತ್ತಿದ್ದಾಗ ಕೆರೆ ಏರಿ ಬಳಿ ಬುಲೆರೋ ಗೂಡ್ಸ್ ಗಾಡಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬುಲೆರೋದಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕೂಡಲೇ ಗಾಯಾಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ಸಿನಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟಗಾಯ‌ವಾಗಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ತಾಲೂಕಿನ ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top