Connect with us

Dvgsuddi Kannada | online news portal | Kannada news online

ದಾವಣಗೆರೆ; KSRTC ಬಸ್ ಬ್ರೇಕ್ ಫೇಲ್ ; ಚಾಲಕನ ಚಾಣಾಕ್ಷತನದಿಂದ ತಪ್ಪಿದ ಭಾರೀ ಅನಾಹುತ….!

IMG 20230922 210942

ದಾವಣಗೆರೆ

ದಾವಣಗೆರೆ; KSRTC ಬಸ್ ಬ್ರೇಕ್ ಫೇಲ್ ; ಚಾಲಕನ ಚಾಣಾಕ್ಷತನದಿಂದ ತಪ್ಪಿದ ಭಾರೀ ಅನಾಹುತ….!

ದಾವಣಗೆರೆ: ಚಿತ್ರದುರ್ಗದಿಂದ ದಾವಣಗೆರೆ ಕಡೆ ಬರುತ್ತಿದ್ದ ksrtc ಬಸ್ ಹೆಬ್ಬಾಳ್ ಟೋಲ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಚಾಣಾಕ್ಷತನದಿಂದ ಭಾರೀ ಅನಾಹುತ ತಪ್ಪಿದೆ. ಚಾಲಕ ಸ್ವಲ್ಪ ನಿರ್ಲಕ್ಷ ವಹಿಸಿದ್ದರೂ ಬಸ್ ನಲ್ಲಿದ್ದ 40 ಪ್ರಯಾಣಿಕರಿಗೆ ಅಪಾಯ ಎದುರಾಗಿತ್ತು. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಚಿತ್ರದುರ್ಗದಿಂದ ದಾವಣಗೆರೆ ಕಡೆ ಬರುತ್ತಿದ್ದ ಬಸ್ ಹೆಬ್ಬಾಳ್ ಟೋಲ್ ಗೇಟ್ ಬಳಿ ಬ್ರೇಕ್ ಫೇಲಾಗಿದೆ. ಆಗ ಚಾಲಕ ರಾಷ್ಟ್ರೀಯ ಹೆದ್ದಾರಿಯ ಚರಂಡಿ ಮೇಲೆ ಬಸ್ ಚಾಲನೆ ಮಾಡಿ ಬಸ್ ನಿಲ್ಲಿಸಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿಸಿದ್ದಾರೆ. ಈ ಅಪಘಾತದಲ್ಲಿ 12 ಮಂದಿಗೆ ಸಣ್ಣ ಗಾಯಗಳಾಗಿವೆ. ಗಾಯಗೊಂಡವರನ್ನು ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಮುಂಭಾಗದ ಗ್ಲಾಸ್ ಒಡೆದಿದೆ. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ದಾವಣಗೆರೆ: ಸೆ.26ರಿಂದ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಅಭಿಯಾನ

 

ದಾವಣಗೆರೆ: ಹೊಸ ರಾಶಿ ಅಡಿಕೆ ದಿಢೀರ್ 3 ಸಾವಿರ ಕುಸಿತ; ಹಳೆಯ ಅಡಿಕೆ ಬೆಲೆಯಲ್ಲಿ ಸ್ವಲ್ಪ ಚೇತರಿಕೆ..!

ದಾವಣಗೆರೆ: ಸೆಪ್ಟೆಂಬರ್ ತಿಂಗಳ ಪಡಿತರ ಆಹಾರ ಧಾನ್ಯ ಹಂಚಿಕೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top