Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಳಗಾವಿಗೆ ಪ್ರತಿಭಟನೆ ನಡೆಸಲು ಹೊರಟ ಬಸ್ ಅಪಘಾತ ; 20 ಕ್ಕೂ ಹೆಚ್ಚು ಜನರಿಗೆ ಗಾಯ

n5643974881702306779614918aef1e4459de6e99a1fd62ef53d46b5f86a8dff47c9810181034e3d941294e

ದಾವಣಗೆರೆ

ದಾವಣಗೆರೆ: ಬೆಳಗಾವಿಗೆ ಪ್ರತಿಭಟನೆ ನಡೆಸಲು ಹೊರಟ ಬಸ್ ಅಪಘಾತ ; 20 ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆ; ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಹೊರಟಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್​ ಅಪಘಾತಕ್ಕೆ ಒಳಾಗಿದೆ. ಲಾರಿಯೊಂದು ಡಿಕ್ಕಿಹೊಡೆದಿದ್ದು, ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮೂರು ಬಸ್​ಗಳಲ್ಲಿ ಮಾದಿಗ ದಂಡೋರ ಸಮಿತಿ ಸದಸ್ಯರು ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದರು. ಮೂರು ಬಸ್ಸುಗಳಲ್ಲಿ ಒಂದು ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಬಸ್ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯ‌ಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದರು. ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top