ದಾವಣಗೆರೆ: 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಶಿಬಿರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಸ್ಪೂರ್ತಿ ಸಾಮಾಜಿಕ ಶೈಕ್ಷಣಿಕ ಅಭಿವೃದ್ದಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಪರಿಶಿಷ್ಟ ಜಾತಿಯ ಉದ್ಯೋಯೋಗಾಕಾಂಕ್ಷಿಗಳಿಗೆ ಅಕ್ಟೋಬರ್ 6 ರಿಂದ 15 ರವರೆಗೆ ಉದ್ಯಮಶೀಲತಾಭಿವೃದ್ಧಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಕರ್ನಾಟಕ ಉದ್ಯಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಧಾರವಾಡ, ಹಾಗೂ ಸ್ಪೂರ್ತಿ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ದಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರದಲ್ಲಿ ಭಾಗವಹಿಸುವ ಅಭ್ಯರ್ಥಿಗಳು 18 ರಿಂದ 55 ವರ್ಷ ವಯೋಮಾನದವರಾಗಿರಬೇಕು.

ಅಭ್ಯರ್ಥಿಗಳು 2 ಪಾಸ್‍ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್‍ನ ಪ್ರತಿಯೊಂದಿಗೆ, ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಪ್ಲಾಟ್ ನಂ: 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ. ತರಬೇತಿದಾರರಾದ ವಿನಯ ಜಿ.ಕೆ. ಮೊ.ಸಂ: 9886115200 ಹಾಗೂ ಬಸವರಾಜ ಜಿ. ಬಿ. ಮೊ.ಸಂ: 9164742033 ಸಂಪರ್ಕಿಸಲು ಸಿಡಾಕ್‍ನ ಜಿಲ್ಲಾ ಜಂಟಿ ನಿರ್ದೇಶಕರು ಆರ್.ಪಿ. ಪಾಟೀಲ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *