ದಾವಣಗೆರೆ ದಕ್ಷಿಣ‌ ಉಪಚುನಾವಣೆ; ಸಮರ್ಥ್ ಗೆ ಟಿಕೆಟ್ ಅಧಿಕೃತ ಘೋಷಣೆ; ಶಾಮನೂರು ಕುಟುಂಬ‌‌ ನಡೆದಿದ್ದೇ ಹಾದಿ; ಬಿ ಇಲ್ಲದೆ ನಾಮಪತ್ರ ಸಲ್ಲಿಸಿದ ಸಮರ್ಥ್ ಗೆ ಕಾಂಗ್ರೆಸ್ ಈಗ ಅಧಿಕೃತ ಮುದ್ರೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು‌ಗೆ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಪಡೆಯಲು ತೀವ್ರ ಪೈಪೋಟಿಗೆ ಏರ್ಪಟ್ಟಿದ್ದ ದಾವಣಗೆರೆ ದಕ್ಷಿಣಕ್ಕೆ ಈಗ ಸಮರ್ಥ್ ಗೆ ಅಧಿಕೃತವಾಗಿ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.

ಹೈಕಮಾಂಡ್ ಇಷ್ಟೊಂದು ವೀಕ್..?

ಬಿ ಫಾರಂ ನೀಡುವುದಕ್ಕಿಂತಲೂ ಮುನ್ನವೇ ನಾಮಪತ್ರ ಸಲ್ಲಿಸಿದ್ದ ಶಾಮನೂರು ಶಿವಶಂಕರಪ್ಪ ಮೊಮ್ಮಗ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ , ಸಂಸದೆ ಪ್ರಭಾಮಲ್ಲಿಕಾರ್ಜುನ ಪುತ್ರ ಸಮರ್ಥ್ ಕಾಂಗ್ರೆಸ್ ಅಧಿಕೃತ ಮುದ್ರೆ ಒತ್ತಿದೆ. ಅಲ್ಪಸಂಖ್ಯಾತರ ತೀವ್ರ ವಿರೋಧದ ನಡುವೆಯೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್‌ ಶಾಮನೂರು ಅವರಿಗೆ ಟಿಕೆಟ್‌ ನೀಡಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಗೂ ಕ್ಯಾರೇ ಎನ್ನದೇ ಬಿ ಫಾರಂ ಇಲ್ಲದೆ ನಾಮಪತ್ರ ಸಲ್ಲಿಸಿದ ಶಾಮನೂರು ಕುಟುಂಬ‌‌ ನಡೆದಿದ್ದೇ ಹಾದಿ ಎನ್ನುವಂತಾಗಿದೆ. ಒಂದೇ ಮನೆಯಲ್ಲಿ ಸಂಸದೆ, ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ, ಈಗ ಮಗನಿಗೆ‌ ವಿಧಾನಸಭೆ ಟಿಕೆಟ್ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮತ್ತೆ ಶಾಮನೂರು ಕುಂಬಕ್ಕೆ ಟಿಕೆಟ್ ನೀಡುವ ಮೂಲಕ ಕುಟುಂಬ‌‌ದ ಹಿತಾಸಕ್ತಿಗೆ ಮಣಿ ಹಾಕಿದೆ. ಕಾಂಗ್ರೆಸ್ ಹೈಕಮಾಂಡ್ ಇಷ್ಟೊಂದು ವೀಕ್..? ಎನ್ನುವ ಪ್ರಶ್ನೆ ಜನಸಾಮಾನ್ಯರಲ್ಲಿ ಮೂಡಿದೆ.

samarth shamanur 3

ನಾಳೆ ಭರ್ಜರಿ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ನಿಂದ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಅವರಿಗೆ ಬಿ ಫಾರಂ ನೀಡಲಾಗಿದೆ. ಅವರು ಸೋಮವಾರ (ಮಾ.23) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಟಿಕೆಟ್ ಗೆ ತೀವ್ರ ಪೈಪೋಟಿ

ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್‌ ಪಾಲಿಗೆ ಕಗ್ಗಂಟಾಗಿತ್ತು. ಅಲ್ಪಸಂಖ್ಯಾತರ ಬಲ ಹೆಚ್ಚಾಗಿರುವ ಕ್ಷೇತ್ರದಲ್ಲಿ ಶತಾಯಗತಾಯ ನಮಗೇ ಟಿಕೆಟ್‌ ನೀಡಬೇಕು ಎಂದು ಅಲ್ಪಸಂಖ್ಯಾತರು ಪಟ್ಟು ಹಿಡಿದಿದ್ದರು. ಇದರ ಬೆನ್ನಲ್ಲೇ ಸಮರ್ಥ್‌ ಶಾಮನೂರು ಬಿ-ಫಾರಂ ಇಲ್ಲದೆಯೇ ನಾಮಪತ್ರವನ್ನೂ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಸಾಧಿಕ್‌ ಪೈಲ್ವಾನ್‌ ಎಂಬುವವರೂ ನಾಮಪತ್ರ ಸಲ್ಲಿಸಿದ್ದರು. ಇದು ಶಾಮನೂರು ಕುಟುಂಬ ಹಾಗೂ ಅಲ್ಪಸಂಖ್ಯಾತರ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿತ್ತು.

ಕುಟುಂಬ ರಾಜಕಾರಣಕ್ಕೆ ಜೈ

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತ ನಾಯಕರ ಸಭೆ ನಡೆಸಿ ಮನವೊಲಿಸಿದ್ದಾರೆ. ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಕುಟುಂಬ ರಾಜಕಾರಣಕ್ಕೆ ಜೈ ಎಂದಿದೆ. ಈ ಮೂಲಕ ಬದಲಾವಣೆ ಗೆ ಪಟ್ಟು ಹಿಡಿದಿದ್ದ ಮುಸ್ಲಿಂ‌ ಸಮುದಾಯಕ್ಕೆಟಿಕೆಟ್ ಕೈ ತಪ್ಪಿದೆ.

ಅಲ್ಪಸಂಖ್ಯಾತರ ಮನವೊಲಿಕೆ

ಅನುಕಂಪದ ಆಧಾರದ ಮೇಲೆ ಕುಟುಂಬದವರಿಗೆ ಟಿಕೆಟ್ ನೀಡುವುದು ರೂಢಿ. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನಿಗೆ ಟಿಕೆಟ್‌ ನೀಡಬೇಕು. ಇದಕ್ಕೆ ನೀವೆಲ್ಲಾ ಸಹಕರಿಸಬೇಕು ಎಂದು ಅಲ್ಪಸಂಖ್ಯಾತ ನಾಯಕರ ಮನವೊಲಿಸಿದರು ಎಂದು ತಿಳಿದು ಬಂದಿದೆ.

ಅಲ್ಪಸಂಖ್ಯಾತರಿಗೆ ಟಿಕೆಟ್‌ ನ್ಯಾಯಯುತ ಬೇಡಿಕೆ ಆದರೂ ದಶಕಗಳಿಂದ ಶಾಮನೂರು ಅವರು ಪಕ್ಷಕ್ಕೆ ಸೇವೆ ಮಾಡಿದ್ದಾರೆ. ದೇಶದ ಅತಿ ಹಿರಿಯ ಶಾಸಕರಾಗಿದ್ದ ಶಾಮನೂರು ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಕುಟುಂಬದವರಿಗೆ ಟಿಕೆಟ್‌ ನೀಡುವುದು ಗೌರವ. ಮುಂದಿನದ್ದನ್ನು ಎರಡೂವರೆ ವರ್ಷದ ಬಳಿಕ ನೋಡೋಣ. ಸದ್ಯಕ್ಕೆ ಎಲ್ಲರೂ ಒಟ್ಟಾಗಿ ಚುನಾವಣೆ ನಡೆಸಿ ಎಂದು ಸೂಚನೆ ನೀಡಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *