ದಾವಣಗೆರೆ: ಜಾತಿ ಗಣತಿ ಜಾರಿಗೆ ಹಿಂದಿನಿಂದಲೂ ವೀರಶೈವ ಲಿಂಗಾಯತ ಮಹಾಸಭಾದಿಂದ ವಿರೋಧ ವ್ಯಕ್ತಪಡಿಸಿದ್ದೇವೆ. ಈಗಲೂ ಅದೇ ನಿಲುವಿಗೆ ಬದ್ಧ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಜಾತಿಗಣತಿಗೆ ಬಗ್ಗೆ ಯಾರು ಏನೇ ಹೇಳಿದರೂ ಜಾತಿಗಣತಿಗೆ ನಮ್ಮ ವಿರೋಧ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿರುವಂತಹ ಬೆಂಬಲದ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಮಾಜಿ ಎಂಪಿ ಸಿದ್ದೇಶ್ವರ ಅವರು ರವೀಂದ್ರನಾಥ್ ಬಗ್ಗೆ ಹಿರಿಯರು ಎಂಬ ಗೌರವ ಇಲ್ಲದಂತೆ ಮಾತನಾಡಿದ್ದಾರೆ. ನಮ್ಮ ಕಾಂಗ್ರೆಸ್ ನಲ್ಲಿ ಆ ರೀತಿ ಮಾತನಾಡುವುದಿಲ್ಲ ನಮ್ಮದು ಶಿಸ್ತಿನ ಪಕ್ಷ. ಬಿಜೆಪಿ ಅವಧಿಯಲ್ಲಿ ಖಾಸಗಿ ಬಸ್ ನಿಲ್ದಾಣದ ವಿನ್ಯಾಸ ಬದಲಿಸಿ ಅಂದ ಹಾಳು ಮಾಡಿದ್ದಾರೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಭೈರತಿ ಬಸವರಾಜ್ ಸಾಕಷ್ಟು ದುಡ್ಡು ಹೊಡೆದರು. ಅದಕ್ಕೆ ಇಲ್ಲಿನ ಅಂದಿನ ಸಂಸದರು ಸಹ ಸಹಕಾರ ನೀಡಿದರು. ನಮ್ಮಲ್ಲಿ ಅಂತದ್ದಕ್ಕೆ ಅವಕಾಶ ಇಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.



