Connect with us

Dvgsuddi Kannada | online news portal | Kannada news online

ದಾವಣಗೆರೆ: ಜಾತಿ ಗಣತಿಗೆ ವೀರಶೈವ ಲಿಂಗಾಯತ ಮಹಾಸಭಾ ವಿರೋಧ; ಶಾಮನೂರು ಶಿವಶಂಕರಪ್ಪ

ದಾವಣಗೆರೆ

ದಾವಣಗೆರೆ: ಜಾತಿ ಗಣತಿಗೆ ವೀರಶೈವ ಲಿಂಗಾಯತ ಮಹಾಸಭಾ ವಿರೋಧ; ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಜಾತಿ ಗಣತಿ ಜಾರಿಗೆ ಹಿಂದಿನಿಂದಲೂ ವೀರಶೈವ ಲಿಂಗಾಯತ ಮಹಾಸಭಾದಿಂದ ವಿರೋಧ ವ್ಯಕ್ತಪಡಿಸಿದ್ದೇವೆ. ಈಗಲೂ ಅದೇ ನಿಲುವಿಗೆ ಬದ್ಧ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಜಾತಿಗಣತಿಗೆ ಬಗ್ಗೆ ಯಾರು ಏನೇ ಹೇಳಿದರೂ ಜಾತಿಗಣತಿಗೆ ನಮ್ಮ ವಿರೋಧ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿರುವಂತಹ ಬೆಂಬಲದ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಮಾಜಿ ಎಂಪಿ ಸಿದ್ದೇಶ್ವರ ಅವರು ರವೀಂದ್ರನಾಥ್ ಬಗ್ಗೆ ಹಿರಿಯರು ಎಂಬ ಗೌರವ ಇಲ್ಲದಂತೆ ಮಾತನಾಡಿದ್ದಾರೆ. ನಮ್ಮ ಕಾಂಗ್ರೆಸ್ ನಲ್ಲಿ ಆ ರೀತಿ ಮಾತನಾಡುವುದಿಲ್ಲ ನಮ್ಮದು ಶಿಸ್ತಿನ ಪಕ್ಷ. ಬಿಜೆಪಿ ಅವಧಿಯಲ್ಲಿ ಖಾಸಗಿ ಬಸ್ ನಿಲ್ದಾಣದ ವಿನ್ಯಾಸ ಬದಲಿಸಿ ಅಂದ ಹಾಳು ಮಾಡಿದ್ದಾರೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಭೈರತಿ ಬಸವರಾಜ್ ಸಾಕಷ್ಟು ದುಡ್ಡು ಹೊಡೆದರು. ಅದಕ್ಕೆ ಇಲ್ಲಿನ ಅಂದಿನ ಸಂಸದರು ಸಹ ಸಹಕಾರ ನೀಡಿದರು. ನಮ್ಮಲ್ಲಿ ಅಂತದ್ದಕ್ಕೆ ಅವಕಾಶ ಇಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top