ದಾವಣಗೆರೆ: ಮಾಜಿ ಸಚಿವರ ಫಾರ್ಮ್ ಹೌಸ್ ನಿಂದ ಸ್ಥಳಾಂತರಿಸಿದ್ದ 2 ವನ್ಯಜೀವಿ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಕಲ್ಲೇಶ್ವರ ಮಿಲ್ ಹಿಂದಿನ ಫಾರ್ಮ್‌ ಹೌಸ್‌ನಲ್ಲಿ ಪತ್ತೆಯಾಗಿದ್ದ ವನ್ಯ ಜೀವಿಗಳಲ್ಲಿ ಎರಡು ಪ್ರಾಣಿಗಳು ಮೃತಪಟ್ಟಿವೆ. ಕೃಷ್ಣಮೃಗ ಮತ್ತು ಕಾಡು‌ಹಂದಿ‌ ಮೃತಪಟ್ಟಿವೆ.

ಜಿಂಕೆ‌, ಕೃಷ್ಣಮೃಗ ಸೇರಿ ವಿವಿಧ ಪ್ರಾಣಿಗಳನ್ನು ತಾಲೂಕಿನ ಆನಗೋಡು ಕಿರುಮೃಗಾಲಯಕ್ಕೆ ಬಿಡಲಾಗಿತ್ತು. ಕೆಲವು ಕಾಡು ಹಂದಿಗಳನ್ನು ಅರಣ್ಯ ಪ್ರದೇಶಕ್ಕೆ‌ ಬಿಡಲಾಗಿತ್ತು. ಆ ವನ್ಯ ಜೀವಿಗಳಲ್ಲಿ 2 ಪ್ರಾಣಿಗಳು ಮೃತಪಟ್ಟಿವೆ.

ಡಿ.21 ರಂದು ನಗರದ ಬಂಬೂ ಬಜಾರ್ ರಸ್ತೆಯಲ್ಲಿರುವ ಮಲ್ಲಿಕಾರ್ಜುನ ಅವರ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದ ವೇಳೆ ಪ್ರಾಣಿಗಳು ಪತ್ತೆಯಾಗಿದ್ದವು. ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಸ್ಥಳಾಂತರಿದ್ದರು. ಕೋರ್ಟ್ ಸೂಚನೆ ಮೇರೆಗೆ ಕಿರುಮೃಗಾಲಯಕ್ಕೆ ಬಿಡಲಾಗಿತ್ತು. ಇದೀಗ ಕೃಷ್ಣಮೃಗ ಮತ್ತು ಒಂದು ಕಾಡು‌ ಹಂದಿ‌ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಮೃತ ಪ್ರಾಣಿಗಳ‌ ಕಳೇ‌ಬರವನ್ನು ವಿಲೇವಾರಿ ಮಾಡಲಾಗಿದೆ. ವಾತಾವರಣ ಬದಲಾವಣೆಯಾದ ಹಿನ್ನೆಲೆಯಲ್ಲಿ  ಮೃತಪಟ್ಟಿರುವ ಸಾಧ್ಯತೆ ಇದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *