ದಾವಣಗೆರೆ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯನ್ನು 2023-24ನೇ ಸಾಲಿಗೆ ಮುಂದುವರೆದಿದ್ದು, ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕೆ, ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಉತ್ಪಾದನೆ ವಲಯಕ್ಕೆ ರೂ.50 ಲಕ್ಷಗಳವರೆಗೆ ಮತ್ತು ಸೇವಾ ವಲಯಕ್ಕೆ ರೂ.20 ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.
ಈ ಸೌಲಭ್ಯವು ಹೊಸದಾಗಿ ಪ್ರಾರಂಭಿಸುವ ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರುತ್ತದೆ. ಈ ಬಗ್ಗೆ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ www.kviconline.gov.in/pmegpeportal ವೆಬ್ಸೈಟ್ನಲ್ಲಿ ತಿಳಿಸಿದ ಮಾರ್ಗಸೂಚಿಯಂತೆ ಅರ್ಜಿಯನ್ನು ಆನ್ಲೈನ್ನಲ್ಲಿ ಸಲ್ಲಿಸಿ ದಾಖಲಾತಿಗಳೊಂದಿಗೆ ಕಚೇರಿಗೆ ಸಂಪರ್ಕಿಸಬಹುದು.



