ದಾವಣಗೆರೆ: ಜಿಲ್ಲಾಸ್ಪತ್ರೆಯ ಮೇಲ್ಚಾವಣಿ ಪದರ ಬಿದ್ದು ಮಗು ಸಹಿತ ಮೂವರಿಗೆ ಗಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಮೇಲ್ಚಾವಣಿಯ ಪದರು ಬಿದ್ದ ಪರಿಣಾಮ ಮಗು ಸೇರಿ ಮೂರಿಗೆ ಗಾಯವಾದ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ ಎದುರಿನ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಪದರು ಬಿದ್ದಿದೆ. ಇದರಿಂದ ವಾರ್ಡ್ ನಲ್ಲಿದ್ದ ಪ್ರೇಮಕ್ಕ (46) ಕಾವೇರಿ(36) ಹಾಗೂ ಎರಡು ವರ್ಷದ ನೇತ್ರಾ ಎಂಬ ಮಗುವಿಗೆ ಗಾಯವಾಗಿದೆ. ಮಗುವಿನ‌ ತಲೆಗೆ ಹಾಗೂ ಇಬ್ಬರು ಮಹಿಳೆಯರ ಕೈ ಮತ್ತು ಇನ್ನೊಬ್ಬರ ಬೆನ್ನಿಗೆ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳು ವಿಜಯನಗರ ಜಿಲ್ಲೆಯ ಹಲವಾಗಲು ಹಾಗೂ ಹಳಲು ಗ್ರಾಮದ ನಿವಾಸಿಗಳಾಗಿದ್ದು, ಪ್ರೇಮಕ್ಕ ಹಾಗೂ ಕಾವೇರಿ ಸಹೋದರಿಯರು. ತಾಯಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಆರೋಗ್ಯ ವಿಚಾರಿಸಲು ಬಂದಿದ್ದ ವೇಳೆ ಈ ಅವಘಡ ನಡೆದಿದೆ.ಈ ಘಟನೆಗೆ ನಡೆದ ನಂತರ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತೊಡಿಸಿದ್ದು, ಗಾಯಾಳುಗಳಿಗೆ ಪರಿಹಾರ ನೀಡುವುದರ ಜೊತೆ ಕಟ್ಟಡ ದುರಸ್ತಿಗೆ ಆಗ್ರಹಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ಬಹುತೇಕ ಕಟ್ಟಡಗಳು ಬಿರುಕು ಬಿಟ್ಟಿದೆ. ಆಸ್ಪತ್ರೆಯಲ್ಲಿ ರೋಗಿಗಳು ಭಯಪಡುವ ವಾತಾವರಣವಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *