ದಾವಣಗೆರೆ: ಏಷ್ಯಾದ ಎರಡನೇ ದೊಡ್ಡ ಕೆರೆ ಸೂಳೆಕೆರೆಗೆ 40 ಲಕ್ಷ ಮೀನಿನ ಮರಿ ಬಿಡಲು ಕ್ರಮ: ಶಾಸಕ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಏಷ್ಯಾದ ಎರಡನೇ ದೊಡ್ಡ ಕೆರೆ ಸೂಳೆಕೆರೆಗೆ ಪ್ರಸ್ತುತ 20 ಲಕ್ಷ ಮೀನು ಮರಿಗಳನ್ನು ಬಿಡಲಾಗಿದೆ. ಮುಂದಿನ ದಿನಗಳಲ್ಲಿ 40 ಲಕ್ಷ ಮೀನಿನ ಮರಿಗಳನ್ನು ಬಿಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ ಹೇಳಿದರು.

ದಾವಣಗೆರೆ: ಮನೆ ಬೀಗ ಮುರಿದು ಕಳ್ಳತನ; 12 ತಾಸಿನಲ್ಲಿ ಆರೋಪಿ ಬಂಧನ | 6.40 ಲಕ್ಷ ಮೌಲ್ಯದ ಚಿನ್ನ ವಶ

900 ಕುಟುಂಬಗಳು ಮೀನುಗಾರಿಕೆ

ಸೂಳೆಕೆರೆಗಡ ಮೀನು ಮರಿ ಬಿಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿ, ಸೂಳೆಕೆರೆ ಸುತ್ತಲಿನ 22 ಗ್ರಾಮಗಳ ಅಂದಾಜು 900 ಕುಟುಂಬಗಳು ಮೀನುಗಾರಿಕೆಗಾಗಿ ಸೂಳೆಕೆರೆಯನ್ನೇ ಅವಲಂಬಿಸಿವೆ. ಕಾಟ್ಲಾ, ರಹೂ, ಗೌರಿ, ಮುರುಗಲ್‌ ತಳಿಯ ಮೀನು ಮರಿಗಳನ್ನು ಬಿಡಲಾಗಿದ್ದು, ಮುಂದಿನ 15 ದಿನಗಳ ಒಳಗಾಗಿ ಮತ್ತೆ 20 ಲಕ್ಷ ಮೀನು ಮರಿಗಳನ್ನು ಈ ಕೆರೆಗೆ ಬಿಡಲಾಗುವುದು ಎಂದರು.

ದಾವಣಗೆರೆ: ಮಹಿಳೆ ಸಾವಿಗೆ ಕಾರಣವಾದ ರಾಟ್​​​​ವೀಲರ್​​ ನಾಯಿಗಳು ಸಾವು; ನಾಯಿ ಮಾಲೀಕ ಅರೆಸ್ಟ್

ಸಿಹಿನೀರು ಮೀನಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ

ಜಿಲ್ಲಾ ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಅಣ್ಣಪ್ಪಸ್ವಾಮಿ‌ ಮಾತನಾಡಿ, ರಾಜ್ಯದಲ್ಲಿ ಸಿಹಿನೀರು ಮೀನಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಇದೆ‌. ಅದರಲ್ಲೂ ಸೂಳೆಕೆರೆಯ ಮೀನು ಪ್ರಸಿದ್ಧವಾಗಿದೆ. ಜೂನ್‌, ಜುಲೈ ಹೊರತುಪಡಿಸಿ ಉಳಿದ ಹತ್ತು ತಿಂಗಳೂ ಸೂಳೆಕೆರೆಯಲ್ಲಿ ಮೀನುಗಾರಿಕೆ ನಡೆಯುತ್ತದೆ. ಇಲ್ಲಿ ಹೆಚ್ಚು ಮೀನುಗಳು ದೊರೆಯುವುದರಿಂದ ಪ್ರತಿವರ್ಷ ಹೆಚ್ಚು ಹೆಚ್ಚು ಮೀನು ಮರಿಗಳನ್ನು ಕೆರೆಗೆ ಬಿಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿ.ಆರ್‌. ಪ್ರಾಜೆಕ್ಟ್‌ ಮೀನುಗಾರಿಕಾ ಉಪನಿರ್ದೇಶಕ ಪ್ರಸನ್ನಕುಮಾರ್‌, ತಾಲ್ಲೂಕು ಸಹಾಯಕ ನಿರ್ದೇಶಕಿ ದೀಪಶ್ರೀ, ಬೋಟಿಂಗ್‌ ವ್ಯವಸ್ಥಾಪಕ ಸೋಮಶೇಖರ್‌, ಮೀನುಗಾರರ ಸಂಘದ ಅಧ್ಯಕ್ಷೆ ಗೌರಮ್ಮ ಫಕೀರಪ್ಪ, ಉಪಾಧ್ಯಕ್ಷ ರಂಗಪ್ಪ, ಕಾರ್ಯದರ್ಶಿ ಪಿ.ಲಕ್ಷ್ಮಣ, ಸದಸ್ಯ ದಶರಥ, ನಾಗರಾಜ್‌ ಹಾಗೂ ಸುತ್ತಲಿನ ಗ್ರಾಮಗಳ ಮೀನುಗಾರರು ಪಾಲ್ಗೊಂಡಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *