Connect with us

Dvgsuddi Kannada | online news portal | Kannada news online

ದಾವಣಗೆರೆ: ಬೋನಿಗೆ ಬಿದ್ದ ಕರಡಿ; ನಿಟ್ಟುಸಿರು ಬಿಟ್ಟ ಜನ

ಚನ್ನಗಿರಿ

ದಾವಣಗೆರೆ: ಬೋನಿಗೆ ಬಿದ್ದ ಕರಡಿ; ನಿಟ್ಟುಸಿರು ಬಿಟ್ಟ ಜನ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿಯ ಮರವಂಜಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಕರಡಿ (Bear) ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ದಾವಣಗೆರೆ: ಕರ್ನಾಟಕ ಬಂದ್; ಬಲವಂತವಾಗಿ ಶಾಲಾ-ಕಾಲೇಜು, ಅಂಗಡಿ ಮುಂಗಟ್ಟು ಮುಚ್ಚಿಸುವಂತಿಲ್ಲ- ಜಿಲ್ಲಾ ಪೊಲೀಸ್ ಎಚ್ಚರಿಕೆ

ಗ್ರಾಮದಿಂದ ತಾಂಡಕ್ಕೆ ಹೋಗುವ ರಸ್ತೆಯ ಶ್ರೀ ಈಶ್ವರ ದೇವಾಲಯ ಬಳಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿನಲ್ಲಿ ರಾತ್ರಿ ವೇಳೆ ಕರಡಿ ಸೆರೆಯಾಗಿದೆ. ಒಂದೂವರೆ ತಿಂಗಳಿಂದ ದೇವಾಲಯದ ಬಳಿ ಕರಡಿ ತಿರುಗಾಡುವುದನ್ನು ಗ್ರಾಮದ ಕೆಲವರಿಗೆ ಕಂಡಿತ್ತು. ಈ ಬಗ್ಗೆ ಚನ್ನಗಿರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ದಾವಣಗೆರೆ: ಅಡಿಕೆ ಧಾರಣೆ; ಸತತ ಕುಸಿತ‌ ಬಳಿಕ ಭರ್ಜರಿ ಏರಿಕೆ – ಮಾ.21ರ ದರ ಎಷ್ಟಿದೆ..?

ಕೂಡಲೇ ಕಾರ್ಯಪ್ರವೃತ್ತರಾದ ವಲಯ ಅರಣ್ಯಾಧಿಕಾರಿ ಶ್ವೇತಾ ಅವರು ಇಲಾಖೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ, ಕರಡಿ ತಿರುಗಾಡುತ್ತಿದ್ದ ಪ್ರದೇಶದ ಆಯಟ್ಟಿನ ಪ್ರದೇಶದಲ್ಲಿ ಬೋನು ಅಳವಡಿಸಿದ್ದರು. ಗುರುವಾರ ರಾತ್ರಿ 11 ಗಂಟೆ ಸಮಯದಲ್ಲಿ 6 ವರ್ಷದ ಕರಡಿ ಸೆರೆಸಿಕ್ಕಿದೆ. ಈ ಕರಡಿಯನ್ನು ಸುರಕ್ಷಿತವಾದ ದಟ್ಟಅರಣ್ಯಕ್ಕೆ ಬಿಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಕರಡಿಯ ಸೆರೆಯಿಂದ ಗ್ರಾಮದ ಜನರಲ್ಲಿ ಆತಂಕ ದೂರವಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.ಕರಡಿ ಕಾರ್ಯಚರಣೆಯಲ್ಲಿ ಅರಣ್ಯ ಅಧಿಕಾರಿಗಳಾದ ಷಜಿಯಾ ಖಾನಂ, ಜಗದೀಶ್, ಪ್ರವೀಣ್ ಮೊಕಾಶಿ, ನಿಂಗಪ್ಪ, ಬಸವನಗೌಡ, ರಂಗಪ್ಪ, ಬಸವರಾಜ್, ದೀಪಕ್, ಪ್ರಭು, ಮೆಹಬೂಬ್, ಸುಭಾನ್, ದೇವಪ್ಪ ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top