ದಾವಣಗೆರೆ: ಚುನಾವಣಾ ಕರ್ತವ್ಯ ಲೋಪ; ಸರ್ಕಾರಿ ಶಾಲೆ ಶಿಕ್ಷಕ ಅಮಾನತು: ಜಿಲ್ಲಾಧಿಕಾರಿ ಆದೇಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವಿಧಾನಸಭೆ ಚುನಾವಣೆ ಹಿನ್ನೆಲೆ ಕರ್ತವ್ಯ ಲೋಪ ಎಸಗಿದ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಜಮ್ಮಾಪುರ ಸಣ್ಣತಾಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಹಾಗೂ ಬಿ.ಎಲ್.ಓ ಆಗಿದ್ದ ಎಂ.ಡಿ.ಬಸವರಾಜ, ಸರ್ಕಾರಿ ನೌಕರನಿಗೆ ತರವಲ್ಲದ ನಡತೆ ಆಧಾರದ ಮೇಲೆ ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯೊಬ್ಬರ ಜೊತೆಗೆ ಪ್ರಚಾರದ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ದೂರು ಸ್ವೀಕರಿಸಲಾಗಿತ್ತು. ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಇದಕ್ಕೆ ಸ್ವಗ್ರಾಮ ಜಮ್ಮಾಪುರ ಸಣ್ಣತಾಂಡದ ತಮ್ಮ ಬೀದಿಯಲ್ಲಿ ಏಪ್ರಿಲ್ 30 ರಂದು ಅಭ್ಯರ್ಥಿ ಚುನಾವಣಾ ಪ್ರಚಾರಕ್ಕೆ ಬಂದಾಗ ಭಾಗವಹಿಸಿದ್ದ ಗ್ರಾಮಸ್ಥರು ನನ್ನನ್ನು ಅಭ್ಯರ್ಥಿಗೆ ಶಿಕ್ಷಕರೆಂದು ಪರಿಚಯಿಸಿದಾಗ ಮೇಳಗಳ ಶಬ್ದಕ್ಕೆ ಕೇಳಿಸದಿದ್ದಾಗ ಕಿವಿ ಹತ್ತಿರ ಹೋಗಿ ಹೇಳಬೇಕಾಯಿತು ಎಂದು ಸಮಜಾಯಿಷಿ ನೀಡಿರುತ್ತಾರೆ.

ಅಭ್ಯರ್ಥಿಯೊಂದಿಗೆ ಸಂಭಾಷಣೆಯಲ್ಲಿ ತೊಡಗಿ ಸುಮಾರು ದೂರ ಕ್ರಮಿಸಿರುವುದು ಕಂಡು ಬಂದಿದ್ದರಿಂದ ಒಬ್ಬ ಸರ್ಕಾರಿ ನೌಕರನಾಗಿ ಚುನಾವಣಾ ಸಂದರ್ಭದಲ್ಲಿ ರಾಜಕೀಯ ಚಟುವಟಿಕೆಯಲ್ಲಿ ಭಾಗವಹಿಸುವುದು ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ. ಈ ನೌಕರರು ಬಿ.ಎಲ್.ಓ.ಆಗಿ ನೇಮಕವಾಗಿದ್ದು ಇವರ ಸ್ಥಳಕ್ಕೆ ಆರ್.ಗಿರಿಜಾಬಾಯಿ ಇವರನ್ನು ನೇಮಕ ಮಾಡಲಾಗಿರುತ್ತದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *