ದಾವಣಗೆರೆ: ರಸ್ತೆ ಬದಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಯುವಕನಿಗೆ ಕಾರು ಡಿಕ್ಕಿ; ಯುವಕ ಸಾ*ವುದಾವಣಗೆರೆ: ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಯುವಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾ*ವನ್ನಪ್ಪಿದ್ದು, 7 ಜನರು ಗಾಯಗೊಂಡ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ದೋಣಿಹಳ್ಳಿ ಬಳಿ ನಡೆದಿದೆ.
ಸಂದೇಶ ನಾಯ್ಕ (19) ಮೃ*ತ ಯುವಕ. ರವಿ, ನಿತಿನ್, ಪ್ರವೀಣ್, ವೆಂಕಟೇಶ್, ಚೇತನ್, ರುದ್ರಾನಾಯ್ಕ ಹಾಗೂ ಆಂಜನೇಯ ಗಾಯಗೊಂಡಿದ್ದಾರೆ. ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರಿಗೆ ಬೈಕ್ ನಲ್ಲಿ ಪ್ರವಾಸ ಮುಗಿಸಿಕೊಂಡು ಚನ್ನಗಿರಿಗೆ ಮರಳುತ್ತಿದ್ದ ಯುವಕರು ದೋಣಿಹಳ್ಳಿ ಬಳಿಯ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದರು. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.