ಚನ್ನಗಿರಿ ಕಸಾಪ ದತ್ತಿ ಉಪನ್ಯಾಸ: ಮಕ್ಕಳಲ್ಲಿ ಕನ್ನಡಾಭಿಮಾನ ಬೆಳೆಸಿ; ಜ್ಯೋತಿ ಕೋರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಚನ್ನಗಿರಿ: ಹರಿದು ಹಂಚಿ ಹೋಗಿದ್ದ ನಮ್ಮ ಕನ್ನಡ ನಾಡನ್ನು ಏಕೀಕರಣ  ಚಳವಳಿಯ ಮೂಲಕ ಒಂದುಗೂಡಿಸಿದ್ದ ಮಹಾತ್ಮರ ಹೋರಾಟಗಳ ತತ್ವ ಮತ್ತು ಆದರ್ಶಗಳನ್ನು ಶಾಲಾ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಅವರಲ್ಲಿ ಕನ್ನಡಾಭಿಮಾನವನ್ನು ಬೆಳೆಸಬೇಕಾಗಿದೆ  ಎಂದು ಚನ್ನಗಿರಿ ಕರವೇ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಕೋರಿ  ತಿಳಿಸಿದರು.

ಪಟ್ಟಣದ ಗಂಗಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಮಕ್ಕಳಲ್ಲಿ ನಾಡಿನ ನೆಲ ಜಲ ಭಾಷೆಯ ಬಗ್ಗೆ ಅಭಿಮಾನವನ್ನು ಬೆಳೆಸಲು ಪೂರಕವಾಗಿವೆ ಎಂದು ಹೇಳಿದರು.

ಜಿಲ್ಲಾ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಎಂ.ಬಿ.ನಾಗರಾಜ್ ಕಾಕನೂರು ಮಾತನಾಡಿ ಸಮಾಜದ ವಾಸ್ತವತೆಯ ಬಗ್ಗೆ ಬೆಳಕು ಚೆಲ್ಲುವ ಸಾಹಿತ್ಯವನ್ನು ವಚನಕಾರರ ವಚನಗಳಲ್ಲಿ  ಕಾಣಬಹುದು ಎಂದು ತಿಳಿಸಿದರು.ಬಸವಣ್ಣ ,ಅಲ್ಲಮಪ್ರಭು  ಮತ್ತು ಸರ್ವಜ್ಞರ ವಚನಗಳು ಸರ್ವಕಾಲಿಕವಾದವುಗಳು. ಅಂತಹ ಸಾಹಿತ್ಯ ಪ್ರಕಾರಗಳು ನಮಲ್ಲಿ ಹುಟ್ಟಿ ದೈನಂದಿನ ಜೀವನದಲ್ಲಿ ಹಾಸುಹೊಕ್ಕಾಗಬೇಕಾಗಿದೆ. 12 ನೇ ಶತಮಾನದ ವಚನಕಾರರ ವಿಚಾರಧಾರೆಗಳನ್ನು ಆಂಗ್ಲ ಭಾಷೆಗೆ ತರ್ಜುಮೆ ಮಾಡಿ ಸಮಾಜದ ಮೇಲೆ ಬೆಳಕು ಚೆಲ್ಲುವ ಅಗತ್ಯವಿದೆ ಎಂದು ಹೇಳಿದರು.

ಕನ್ನಡ ಪರಿಚಾರಕ ಜಿ.ಚಿನ್ನಸ್ವಾಮಿ ಮಾತನಾಡಿ, ಶಾಂತವೇರಿಗೋಪಾಲಗೌಡ, ಜೆ.ಹೆಚ್.ಪಟೇಲ್, ಜಯಪ್ರಕಾಶ್ ನಾರಾಯಣರಂತಹ ಮಹಾತ್ಮರ ಸಮಾಜವಾದದ ತತ್ವಾದರ್ಶಗಳನ್ನು ಅನುಸರಿಸಬೇಕಾಗಿದೆ ಎಂದರು. ಸಾಮಾಜಿಕ ಕಾರ್ಯಕರ್ತ ರಾಕೇಶ್ ಪಾಂಡೆ ಮಾತನಾಡಿ ಇಂದಿನ ನವಪೀಳಿಗೆಯಲ್ಲಿ ಕನ್ನಡ ನಾಡಿನ ನೆಲ,ಜಲ,ಭಾಷೆ ಹಾಗೂ ಪರಂಪರೆಗಳ ಬಗ್ಗೆ ಅಭಿಮಾನ ಕಡಿಮೆಯಾಗುತ್ತಿರುವುದು ವಿಷಾದದ ಸಂಗತಿ  ಎಂದು ಕಳವಳ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಅಧ್ಯಕ್ಷತೆ ವಹಿಸಿದ್ದರು.ನಿಕಟಪೂರ್ವ ಕಸಾಪ ಅಧ್ಯಕ್ಷ ಎಂ.ಯು.ಚನ್ನಬಸಪ್ಪ,ಕೋಶಾಧ್ಯಕ್ಷ ಬಿ.ಈ.ಸಿದ್ದಪ್ಪ,ಪಿ.ಓಂಕಾರಮೂರ್ತಿ, ಮುಖಂಡ ಶಿವಲಿಂಗಪ್ಪ ಮರವಂಜಿ ಮತ್ತಿತರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *