Connect with us

Dvgsuddi Kannada | online news portal | Kannada news online

ದಾವಣಗೆರೆ ಲಿಂಗದಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ: ಸಿಸಿ ಟಿವಿ ಕ್ಯಾಮಾರಾದಲ್ಲಿ ದೃಶ್ಯ ಸೆರೆ

IMG 20221221 104929

ದಾವಣಗೆರೆ

ದಾವಣಗೆರೆ ಲಿಂಗದಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ: ಸಿಸಿ ಟಿವಿ ಕ್ಯಾಮಾರಾದಲ್ಲಿ ದೃಶ್ಯ ಸೆರೆ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿದೆ. ಈ ದೃಶ್ಯ ಇದೀಗ ಸಿಸಿ‌ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗ್ರಾಮದ ಲೋಕೇಶನಾಯ್ಕ ಎಂಬುವರ ಮನೆಯಲ್ಲಿ ಅಳವಡಿಸಿರುವ ಸಿಸಿ ಟಿವಿ ಕ್ಯಾಮೆರಾದಲ್ಲಿ ರಾತ್ರಿ ವೇಳೆ ಚಿರತೆ ಬಂದು ಹೋದ ದೃಶ್ಯ ದಾಖಲಾಗಿದೆ.

ಕೆಲ ದಿನಗಳಿಂದ ಗ್ರಾಮದಲ್ಲಿ ನಾಯಿ ನಾಪತ್ತೆಯಾಗಿತ್ತು. ಚಿರತೆ ದಾಳಿ ನಡೆಸಿದ ಬಗ್ಗೆ ಗ್ರಾಮದ ಜನರಲ್ಲಿ ಅನುಮಾನ ಇತ್ತು. ಈಗ ಚಿರತೆ ಕಾಣಿಸಿಕೊಂಡಿದ್ದು ಗ್ರಾಮದಲ್ಲಿ ಇನ್ನಷ್ಟು ಭಯದ ವಾತಾವರಣ ನಿರ್ಮಾಣವಾಗಿದೆ. ಜನರಿಗೆ ಅಪಾಯ ಆಗುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top