ಅಂಬೇಡ್ಕರ್ ಅಹಿಂಸಾತ್ಮಕ ಹೋರಾಟದಿಂದ ಸಾಧನೆ ಮಾಡಿದ ಮಹಾನಾಯಕರು: ಬಸವರಾಜು ವಿ ಶಿವಗಂಗಾ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಚನ್ನಗಿರಿ: ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಅಹಿಂಸಾತ್ಮಕ ಹೋರಾಟದಿಂದ ಸಾಧನೆ ಮಾಡಿದ ಮಹಾನಾಯಕರು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ರವರು ತಿಳಿಸಿದರು.

ತಾಲ್ಲೂಕಿನ ಚಿಕ್ಕೂಲಿಕೆರೆ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಬಾಬು ಜಗಜೀವನರಾಂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಅಜ್ಜಿಹಳ್ಳಿ ಗ್ರಾಮ ಪಂಚಾಯ್ತಿ, ಅಂಗನವಾಡಿ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ರಕ್ತದಾನ ಶಿಬಿರದಲ್ಲಿ ಭಾಗಿವಹಿಸಿದ್ದ ಬಸವರಾಜು ವಿ ಶಿವಗಂಗಾ ಸಮಾನತೆಗಾಗಿ ಶೋಷಿತರ ಪರವಾಗಿ ಅಂಬೇಡ್ಕರ್ ರವರು ಅಹಿಂಸಾತ್ಮಕವಾಗಿ ಹೋರಾಟ ಮಾಡಿದಂತವರು ಎಂದರು.

shivagannga 2

ವಿಶ್ವದಲ್ಲಿ ಅತೀದೊಡ್ಡ ಸಂವಿಧಾನದಲ್ಲಿ ಭಾರತದ ಸಂವಿಧಾನ ಕೂಡ ಒಂದು ಇಂಥ ಅದ್ಭುತ ಕಾನೂನು ಹೊಂದಿರುವ ಸಂವಿಧಾನವನ್ನ ಡಾ. ಬಿ. ಆರ್ ಅಂಬೇಡ್ಕರ್ ರವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು. ಕೇವಲ ಏಪ್ರಿಲ್ 14 ರ ಅಂಬೇಡ್ಕರ್ ಜಯಂತಿಯಂದು ಮಾತ್ರ ಇಂಥ ಮಹಾನ್ ವ್ಯಕ್ತಿಯನ್ನ ಸ್ಮರಿಸುವಂತದ್ದಲ್ಲ  ಪ್ರತಿ ನಿತ್ಯವೂ ಅಂಬೇಡ್ಕರ್ ಅವರನ್ನ ಪ್ರತಿಯೊಬ್ಬ ಭಾರತೀಯ ಸ್ಮರಿಸಲೇಬೇಕು ಎಂದು ಶಿವಗಂಗಾ ಬಸವರಾಜು ತಿಳಿಸಿದರು.

ಸಮಾಜದಲ್ಲಿ ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವ ತತ್ವಗಳ ಆಧಾರದ ಮೇಲೆ ಶೋಷಿತ ಸಮುದಾಯಗಳ ಪರವಾಗಿ ಸತತವಾಗಿ ಹೋರಾಡಿದವರು ಡಾ. ಅಂಬೇಡ್ಕರ್ ಅವರು, ಆ ಹೋರಾಟದ ಪ್ರತಿಫಲವಾಗಿ ಇಂದು ನಾವೆಲ್ಲಾ ಸಹೋದರತೆಯಿಂದ ಬಾಳುತ್ತೇವೆ, ಅಸ್ಪರ್ಶತೆಯ ಅಂಧಾಕಾರದಿಂದ ಹೊರಗಡೆ ಬಂದಿದ್ದೇವೆ.ಅಂಬೇಡ್ಕರ್ ಮಹಾನ್ ಜ್ಞಾನಿ,ಸಮಾನತೆ, ಸಹೋದರತೆ ಹೋರಾಟಗಾರರು, ಶೋಷಿತರ ಪರವಾಗಿ ನಿಂತ ಮಹಾನ ನಾಯಕರಾದ  ಕಾರಣ ಎಲ್ಲರಿಗೂ ಸ್ವಾತಂತ್ರ್ಯ, ಸಮಾನತೆ ಬೇಕೆಂದು ಸಂವಿಧಾನ ರಚನೆ ಮಾಡುವ ಮೂಲಕ ವಿಶ್ವ ಕಂಡ ಅಸಮಾನ್ಯ ವ್ಯಕ್ತಿಯಾದರು.

shivagannga 3

ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಅವರ ತಂದೆ ರಾಮ್ ಜಿ ಸಕ್ಪಲ್ ಅವರ ಕಷ್ಟದ ಹಾದಿಗಳೇ ಇಂದು ಸಮಾನತೆ, ಸ್ವಾತಂತ್ರ್ಯ ಸಿಗಲು ಕಾರಣ ನಾವೆಲ್ಲರೂ ಡಾ. ಬಿ. ಆರ್ ಅಂಬೇಡ್ಕರ್ ಅವರ ಆದರ್ಶಗಳನ್ನ ಪರಿಪಾಲಿಸಬೇಕು, ಹೋರಾಟದ ಹಾದಿಯಲ್ಲಿ ನಡೆಯಬೇಕಾಗಿದೆ ಎಂದು ಬಸವರಾಜು ವಿ ಶಿವಗಂಗಾ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಶ್ರೀಮತಿ  ಅನುಷಾ ಪ್ರಶಾಂತ್, ಗ್ರಾಮಸ್ಥರಾದ ಶಿವಲಿಂಗಪ್ಪ, ನಾಗೇಂದ್ರಪ್ಪ, ಇಟ್ಟಗಿ ತಿಮ್ಮಯ್ಯ, ಮಹೇಶ್, ಲಿಂಗಾರಾಜು ಹಾಗೂ ತಾಲ್ಲೂಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಗೌಡ್ರು ಭರತ್ ಪಾಟೀಲ್ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *