Connect with us

Dvgsuddi Kannada | online news portal | Kannada news online

ದಾವಣಗೆರೆ: ಗುಡುಗು ಸಹಿತ ಬಿರು ಗಾಳಿಗೆ ವಿದ್ಯುತ್ ತಂತಿ ಕಟ್ ; ಅಡಿಕೆ ಬೇಯಿಸು ಮನೆಗೆ ಬೆಂಕಿ; ಲಕ್ಷಾಂತರ ಮೌಲ್ಯದ ಅಡಿಕೆ ಸುಟ್ಟು ಭಸ್ಮ

IMG 20230421 221555

ಚನ್ನಗಿರಿ

ದಾವಣಗೆರೆ: ಗುಡುಗು ಸಹಿತ ಬಿರು ಗಾಳಿಗೆ ವಿದ್ಯುತ್ ತಂತಿ ಕಟ್ ; ಅಡಿಕೆ ಬೇಯಿಸು ಮನೆಗೆ ಬೆಂಕಿ; ಲಕ್ಷಾಂತರ ಮೌಲ್ಯದ ಅಡಿಕೆ ಸುಟ್ಟು ಭಸ್ಮ

ದಾವಣಗೆರೆ: ಗುಡುಗು ಸಹಿತ ಬಿರು ಗಾಳಿಗೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಅಡಿಕೆ ಬೇಯಿಸುವ ಮನೆಗೆ ಬೆಂಕಿ ಬಿದ್ದಿದ್ದು, ಬೇಯಿಸಿ ಒಣಗಿಸಿ ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಅಡಿಕೆ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ.

ಚನ್ನಗಿರಿ ತಾಲ್ಲೂಕಿನ ದಾಗಿನಕಟ್ಟೆಯ ಗ್ರಾಮದ ಮಾಳಗೆರೆ ತಿಪ್ಪಣ್ಣ ಎಂಬುವರ ಅಡಿಕೆ ಬೇಯಿಸುವ ಮನೆ ಸುಟ್ಟು ಕರಕಲಾಗಿದೆ.‌ ಸಂಜೆ ಗುಡುಗು, ಸಿಡಿಲು ಸಹಿತ ಬಿರು ಗಾಳಿ ಬೀಸಿದೆ. ಇದರಿಂದ ವಿದ್ಯುತ್ ತಂತಿ ಕಟ್ ಆಗಿ ಮನೆ ಮೃಲೆ ಬಿದ್ದಿದೆ. ವಿದ್ಯುತ್ ತಂತಿಯಿಂದ ಹೊತ್ತಿದ ಬೆಂಕಿ ಕಿಡಿ ಜ್ವಾಲೆಯಾಗಿ ಧಗ ಧಗನೇ ಹೊತ್ತಿ ಉರಿದಿದೆ. ಹೀಗಾಗಿ ಖೇಣಿ ಮನೆಯಲ್ಲಿ ಸಂಗ್ರಹಿಸಿದ್ದ ಲಕ್ಷಾಂತರ ಬೆಲೆಯ ಅಡಿಕೆ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳೀಯರು ಕೂಡಲೇ ಅಗ್ನಿ ಶಾಮಕ‌ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಇಡೀ ಮನೆ ಸುಟ್ಟು ಹೋಗಿದೆ. ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top