ಅರಣ್ಯ ಭೂಮಿ ಒತ್ತುವರಿ ಮಾಡಿ ಅಡಿಕೆ ಹಾಕಿದವರಿಗೆ ಶಾಕ್; 15 ಎಕರೆ ಒತ್ತುವರಿ ತೆರವು- ಫಲಕ್ಕೆ ಬಂದಿದ್ದ ಅಡಿಕೆ, ಬಾಳೆ‌ ನಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅರಣ್ಯ ಭೂಮಿ ಒತ್ತುವರಿ ಮಾಡಿ ಅಡಿಕೆ, ಬಾಳಿ ಹಾಕಿದ ರೈತರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಅದರಲ್ಲೂ ಫಸಲಿಗೆ ಬಂದ 15 ಎಕರೆಯ ಅಡಿಕೆ, ಬಾಳೆ ಬೆಳೆ ನಾಶ ಮಾಡಿ ಒತ್ತುವರಿಯಾದ ಭೂಮಿ ಅರಣ್ಯ ಇಲಾಖೆ ಪುನಃ ವಶಪಡಿಸಿಕೊಂಡಿದೆ. ಇದರಿಂದ ಕಷ್ಠಪಟ್ಟು ಬೆಳೆದ ಫಸಲಿಗೆ ಬಂದಿದ್ದ 3 ಸಾವಿರ ಬಾಳೆ, ಅಡಿಕೆ‌ ಮರನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಿಬ್ಬಂದಿ ತೆರವು ಮಾಡಿದ್ದಾರೆ.

ಚನ್ನಗಿರಿ ತಾಲೂಕಿನ ಶಾಂತಿಸಾಗರದ ಗುಡುಂಘಟ್ಟದ ಸರ್ವೇ ನಂ. 43 ರಲ್ಲಿ 15 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿತ್ತು. ಒತ್ತುವರಿಯಾದ ಭೂಮಿಯಲ್ಲಿ ರೈತರು ಅಡಿಕೆ ಮತ್ತು ಬಾಳೆ ಬೆಳೆಯನ್ನ ಬೆಳೆದಿದ್ದರು. ಇದೀಗ ಅರಣ್ಯ ಅಧಿಕಾರಿಗಳು ಒತ್ತುವರಿ ತೆರವು ಮಾಡಿ, ಸರ್ಕಾರದ ವಶಕ್ಕೆ ಪಡೆದಿದ್ದಾರೆ.

ಸುಮಾರು ವರ್ಷಗಳಿಂದ ರೈತರು ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿ ಸಾಗುವಳಿ ಮಾಡಿಕೊಂಡು ಅಲ್ಲಿ ಬೆಳೆಗಳನ್ನ ಬೆಳೆಯುತ್ತಾ ಬಂದಿದ್ದರು. ಆ ನಂತರ ಯಾರೂ ಕೇಳದಿದ್ದಾಗ ಅಡಿಕೆ ತೋಟ ಮಾಡಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *