Connect with us

Dvgsuddi Kannada | online news portal | Kannada news online

ದಾವಣಗೆರೆ: ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ಮಚ್ಚಿನಿಂದ ತಲೆಗೆ ಹೊಡೆದು ಕೊಲೆ; A1 ಆರೋಪಿ ಬಂಧನ

ಚನ್ನಗಿರಿ

ದಾವಣಗೆರೆ: ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ಮಚ್ಚಿನಿಂದ ತಲೆಗೆ ಹೊಡೆದು ಕೊಲೆ; A1 ಆರೋಪಿ ಬಂಧನ

ದಾವಣಗೆರೆ: ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ಮೊದಲ ಪತ್ನಿ, ಮಗ, ಆಕೆಯ ಅಣ್ಣ ಹಾಗೂ ತಂದೆ ಸೇರಿ ಪತಿಯನ್ನು ಮಚ್ಚಿನಿಂದ ತಲೆಗೆ ಹೊಡೆದು ಕೊಲೆ ಮಾಡಿಸಿದ್ದರು. ಕೊಲೆ ನಂತರ. ತಲೆಮರೆಸಿಕೊಂಡಿದ್ದ ಪ್ರಕರಣದ A1 ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಂಗಸ್ವಾಮಿ ಟಿ. ಎನ್. ಮೈಕಲ್ ರಂಗ ಎಂಬಾತನನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.

ಚನ್ನಗಿರಿ ತಾಲ್ಲೂಕಿನ ಅಜ್ಜಿಹಳ್ಳಿ ಗ್ರಾಮದ ವಾಸಿಯಾದ ಹನುಮಂತಪ್ಪ ಎಂಬುವವನ 1ನೇ ಹೆಂಡತಿ ಆಶಾ ಮತ್ತು ಮಕ್ಕಳು ಜಮೀನಿನಲ್ಲಿ ಪಾಲು ಕೊಡಲಿಲ್ಲವೆಂದು ಆಕೆಯ ಅಣ್ಣ ರಂಗಸ್ವಾಮಿ, ಮಗ ಲಿಖಿತ್, ತನ್ನ ತಂದೆ ವಿ.ಟಿ ನಾಗರಾಜಪ್ಪ ಸೇರಿ ಹನುಮಂತಪ್ಪನನ್ನು ಕೊಲೆ ಮಾಡುವ ಸಂಚು ರೂಪಿಸಿದ್ದರು.

ರಂಗಸ್ವಾಮಿಯು 2024ರ ನವೆಬಂರ್ 28ರಂದು ಬೆಳಿಗ್ಗೆ ಸುಮಾರು7 ಗಂಟೆ ಸಮಯದಲ್ಲಿ ಅಜ್ಜಿಹಳ್ಳಿ ಗ್ರಾಮದ ರಸ್ತೆಯಲ್ಲಿ ಬೈಕಿನಲ್ಲಿದ್ದ ಹನುಮಂತಪ್ಪನನ್ನು ಹಿಂಬಾಲಿಸಿಕೊಂಡು ಹೋಗಿ ಮಚ್ಚಿನಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದನು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಹನುಮಂತಪ್ಪನನ್ನು ಕೊಲೆ ಮಾಡಿ ಎಸ್ಕೆಪ್ ಆಗಿದ್ದ ರಂಗಸ್ವಾಮಿ.ಟಿ.ಎನ್ . ಮೈಕಲ್ ರಂಗ ಪತ್ತೆಗೆ ಬಲೆ ಬೀಸಲಾಗಿತ್ತು. ಆರೋಪಿ ಸಿಕ್ಕಿರಲಿಲ್ಲ, ಇಧೀ ಪೊಲೀಸರು ಕಾರ್ಯಾಚರಣೆ ಯಶಸ್ವಿಯಾಗಿದ್ದು, ಪ್ರಕರಣದ ಮೊದಲ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಆರೋಪಿ ಬಂಧಿಸಿದ ಚನ್ನಗಿರಿ ಪೊಲೀಸ್ ರಿಗೆ ಎಸ್ಪಿ ಜಿಲ್ಲಾ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top