Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ತೋಟದಲ್ಲಿ ಹಾಕಿದ್ದ ಬಲೆಗೆ ಸಿಕ್ಕು ವಿಲವಿಲ ಒದ್ದಾಡಿದ ಚಿರತೆ ಮರಿ; ಅರಣ್ಯ ಇಲಾಖೆಯಿಂದ ರಕ್ಷಣೆ

dvg channagiri

ಚನ್ನಗಿರಿ

ದಾವಣಗೆರೆ: ಅಡಿಕೆ ತೋಟದಲ್ಲಿ ಹಾಕಿದ್ದ ಬಲೆಗೆ ಸಿಕ್ಕು ವಿಲವಿಲ ಒದ್ದಾಡಿದ ಚಿರತೆ ಮರಿ; ಅರಣ್ಯ ಇಲಾಖೆಯಿಂದ ರಕ್ಷಣೆ

ದಾವಣಗೆರೆ: ಅಡಿಕೆ ತೋಟದಲ್ಲಿ ಹಂದಿಗಳನ್ನು ಹಿಡಿಯಲು ಹಾಕಿದ್ದ ಬಲೆಗೆ ಚಿರತೆ ಮರಿಯೊಂದು ಸಿಲುಕಿ ವಿಲವಿಲ ಒದ್ದಾಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣದಲ್ಲಿ ನಡೆದಿದೆ.

ಬಸವಾಪಟ್ಟಣದ ರೈತ ಎಂ.ಎಸ್‌. ಜಯಣ್ಣ ಬೆಳಗ್ಗೆ ಜಮೀನಿಗೆ ಹೋದಾಗ ಅಡಿಕೆ ತೋಟದಲ್ಲಿ ಯಾವುದೋ ಕಾಡುಪ್ರಾಣಿ‌ ಮರಿ ಕೂಗುವ ಶಬ್ದ ಕೇಳಿದೆ.‌ ತಕ್ಷಣ ಸ್ಥಳಕ್ಕೆ ಹೋಗಿ ನೋಡಿದ್ದಾಗ ಚಿರತೆ ಮರಿ ಬಲೆಯಲ್ಲಿ ಸಿಕ್ಕು ವಿಲವಿಲ ಒದ್ದಾಡುತ್ತಿರುವುದು ಕಂಡಿದೆ. ಅದರ ಹತ್ತಿರ ತಾಯಿ ಚಿರತೆ‌ ಸಹ ಇದ್ದು, ಭಯಗೊಂಡು‌ ರೈತ ಬಸವಾಪಟ್ಟಣ ಪೊಲೀಸ್‌ ಠಾಣೆ, ಅರಣ್ಯ ಇಲಾಣಖೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಚಿರತೆ ಮರಿಯನ್ನು ಬಲೆಯಿಂದ ಬಿಡಿಸಿದ್ದು, ತಾಯಿ ಹುಡುಕುತ್ತ ಗುಡ್ಡದ ಕಡೆಗೆ ಓಡಿದೆ ಹೋಗಿದೆ. ಚಿರತೆಯನ್ನು ಹಿಡಿಯಲು ಸ್ಥಳದಲ್ಲಿ ಬೋನು ಅಳವಡಿಸಿದ್ದು, ಮೂರು ದಿನಗಳ ಕಾಲ ಯಾರೂ ಅತ್ತಕಡೆ ಹೋಗಬಾರದು ಎಂದು ಅರಣ್ಯ ಉಪ ವಲಯಾಧಿಕಾರಿ ಮನೋಹರ್‌ ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top