Connect with us

Dvgsuddi Kannada | online news portal | Kannada news online

ದಾವಣಗೆರೆ: ಕ್ಚಿಂಟಾಲ್ ಗೆ 5,650 ರೂ. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ, ನೋಂದಣಿ ಪ್ರಾರಂಭ

ಕಾಳು

ದಾವಣಗೆರೆ

ದಾವಣಗೆರೆ: ಕ್ಚಿಂಟಾಲ್ ಗೆ 5,650 ರೂ. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ, ನೋಂದಣಿ ಪ್ರಾರಂಭ

ದಾವಣಗೆರೆ: ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಕಾಳು (chickpea) ಉತ್ಪನ್ನವನ್ನು ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (minimum support price) ಖರೀದಿಸಲು ಸರ್ಕಾರ ಆದೇಶಿಸಿದ್ದು, ಖರೀದಿಗೆ ನೊಂದಣಿಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ: ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉತ್ತಮ ಗುಣಮಟ್ಟದ ಕಡಲೆಕಾಳಿಗೆ ಸರ್ಕಾರ ಪ್ರತಿ ಕ್ವಿಂಟಾಲ್‍ಗೆ 5650 ರೂ. ನಿಗದಿಪಡಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಕಡಲೆಕಾಳಿನ ಬೆಲೆ ಕುಸಿದಿದ್ದು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ರೈತರ ಹಿತಕಾಯಲು ಸರ್ಕಾರದ ವತಿಯಿಂದ ಜಿಲ್ಲೆಯಲ್ಲಿ ಕೂಡಲೆ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಜಗಳೂರು ಮತ್ತು ಚನ್ನಗಿರಿ ಎಪಿಎಂಸಿ ಆವರಣದಲ್ಲಿ ರೈತರ ನೊಂದಣಿ ಕಾರ್ಯ ಪ್ರಾರಂಭಿಸಬೇಕು. ನೋಂದಣಿಗೂ ಮುನ್ನ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿರಬೇಕು.

ಖರೀದಿ ಕೇಂದ್ರಕ್ಕೆ ಅವಶ್ಯಕವಿರುವ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಬೇಕು ಹಾಗೂ ಖರೀದಿಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಪೂರ್ವ ಸಿದ್ಧತೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗರಿಷ್ಠ 20 ಕ್ವಿಂ. ಮಾತ್ರ ಖರೀದಿ: ಎಫ್‍ಎಕ್ಯೂ ಗುಣಮಟ್ಟದ ಕಡಲೆಕಾಳಿಗೆ ಪ್ರತಿ ಕ್ವಿಂಟಾಲ್ ರೂ. 5650 ರೂ. ಬೆಂಬಲ ಬೆಲೆ ನಿಗದಿಪಡಿಸಿದ್ದು, ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳಿ ರಾಜ್ಯದ ವತಿಯಿಂದ ಖರೀದಿ ಏಜೆನ್ಸಿಯಾಗಿದೆ. ಜ.27 ರಿಂದ 80 ದಿನಗಳ ಕಾಲ ರೈತರಿಂದ ನೊಂದಣಿ ಕಾರ್ಯ ನಡೆಯಲಿದ್ದು, ಖರೀದಿಯೂ ಕೂಡ 90 ದಿನಗಳ ಕಾಲ ನಡೆಯಲಿದೆ. ಪ್ರತಿ ಎಕರೆಗೆ 4 ಕ್ವಿಂಟಾಲ್, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂ. ಕಡಲೆಕಾಳು ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ. ರೈತರು ಇದರ ಸದುಪಯೋಗ ಮಾಡಿಕೊಳ್ಳಲು ಅವರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top