Connect with us

Dvgsuddi Kannada | online news portal | Kannada news online

ದಾವಣಗೆರೆ: ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

images 78

ದಾವಣಗೆರೆ

ದಾವಣಗೆರೆ: ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರಾ ಬಡಾವಣೆಯ ಮೂರು ವರ್ಷದ ಮಗುವೊಂದು ನೀರಿನ ತೊಟ್ಟಿಯಲ್ಲಿ ಬಿದ್ದು, ಮೃತಪಟ್ಟ ಘಟನೆ ನಡೆದಿದೆ.

ಪಟ್ಟಣದ ತುಂಗಭದ್ರಾ ಬಡಾವಣೆಯ ಆಸದ್ (3) ಮೃತಪಟ್ಟ ಮಗು. ತೊಟ್ಟಿಯಿಂದ ಮೇಲೆ ಎತ್ತಿದ ತಕ್ಷಣ ಪಟ್ಟಣದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿಗೆ ಸೂಕ್ತ ಚಿಕಿತ್ಸೆ ನೀಡದ್ದರಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಮಗುವಿನ ಸಂಬಂಧಿಗಳು, ಆಸ್ಪತ್ರೆ ಗೆ ಮುತ್ತಿಗೆ ಹಾಕಿ ಗಲಾಟೆ ಮಾಡಿದ್ದಾರೆ.

ಗುಂಪಿನಲ್ಲಿದ್ದವರು ಯಾರೋ ಕಲ್ಲು ತೂರಿದ್ದರಿಂದ ಆಸ್ಪತ್ರೆ ಆವರಣದಲ್ಲಿದ್ದ ಆಂಬ್ಯುಲೆನ್ಸ್ ಗಾಜು ಒಡೆದಿದೆ. ನೀರಿನ ತೊಟ್ಟಿಯಲ್ಲಿ ಬಿದ್ದ ಮಗುವನ್ನು ಆಸ್ಪತ್ರೆಗೆ ಕರೆ ತಂದಾಗ  ಸರಿಯಾಗಿ ಪರೀಕ್ಷಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾತಾವರಣ ತಿಳಿಗೊಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top