ದಾವಣಗೆರೆ ಚಿತ್ರಸಂತೆಯ ಹಂದರ ಕಂಬ ಪೂಜಾ ಕಾರ್ಯಕ್ರಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಾಳೆ (ಏ.17) ನಗರದ ಎವಿಕೆ ಕಾಲೇಜ್ ರಸ್ತೆ ಯಲ್ಲಿ ನಡೆಯಲಿರುವ ಪ್ರಥಮ ದಾವಣಗೆರೆ ಚಿತ್ರಸಂತೆಯ ಹಂದರ ಕಂಬ ಪೂಜಾ ಕಾರ್ಯಕ್ರಮವನ್ನು ಲೋಕಸಭಾ ಸದಸ್ಯ ಜಿ. ಎಂ.ಸಿದ್ದೇಶ್ವರ ಇಂದು ನೆರವೇರಿಸಿದರು.

ದಾವಣಗೆರೆಯಲ್ಲಿ ನಡೆಯುತ್ತಿರುವ ಚಿತ್ರಕಲಾ ಸಂತೆ ಗೆ ನಗರದ ಜನತೆ ಹೆಚ್ಚು ಸಂಖ್ಯೆಯಲ್ಲಿ ಬಂದು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಕಲಾವಿದರ ಕಲಾಕೃತಿ ವೀಕ್ಷಿಸಿ, ಖರೀದಿಸಿ ಕಲಾವಿದರನ್ನು ಪ್ರೊತ್ಸಾಹಿಸಿ ಎಂದು ಸಂಸದ ಸಿದ್ದೇಶ್ವರ ಹೇಳಿದರು.

ಮೇಯರ್ ಜಯಮ್ಮ ಗೋಪನಾಯ್ಕ ಮಾತನಾಡಿ, ಈ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಸಹಕಾರವಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲಿ. ಚಿತ್ರಕಲಾ ಸಂತೆಯ ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಮೇಯರ್ ಬಿ. ಜಿ. ಅಜಯಕುಮಾರ್ ಈ ಕಾರ್ಯಕ್ರಮ ಯಶಸ್ವಿಗೆ ಜಿಲ್ಲೆಯ ಜನತೆ ಆಗಮಿಸಿ ಚಿತ್ರಸಂತೆಯನ್ನು ನೋಡಿಬೇಕು ಎಂದರು.

ದಾವಣಗೆರೆ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಸದಾನಂದ ಹೆಗಡೆ, ಡಿ. ಶೇಷಾಚಲ, ರವಿ ಹುದ್ದಾರ, ಶಾಂತಯ್ಯ ಪರಡಿಮಠ, ಜೆ ಜಿ ವಿಜಯಕುಮಾರ, ಅಶೋಕ, ಕಿರಣ ಕುಮಾರ ,ಅಶ್ವಿನಿ , ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *