ದಾವಣಗೆರೆ: ಚಿತ್ರದುರ್ಗ ಜಿಲ್ಲೆಯ ಸಾಣೇಹಳ್ಳಿಯಲ್ಲಿ ಶ್ರೀ ಶಿವಕುಮಾರ ಕಲಾಸಂಘ ಮತ್ತು ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 12 ರಿಂದ 30ರವರೆಗೆ ಮಕ್ಕಳ ಹಬ್ಬ (ಬೇಸಿಗೆ ಶಿಬಿರ) ಆಯೋಜಿಸಲಾಗಿದೆ.
ಶಿಬಿರದಲ್ಲಿ ಕೋಲಾಟ, ಚಿತ್ರಕಲೆ, ಮಣ್ಣಾಟ, ವೀರಗಾಸೆ, ಯೋಗಾಸನ, ರಂಗಾಟಗಳು, ದಿನಕ್ಕೊಂದು ಪದ್ಯರಚನೆ, ಮುಖವಾಡ ತಯಾರಿ, ಕಥೆ ಹೇಳುವ ಮತ್ತು ಕಥೆ ಕಟ್ಟುವ ತರಗತಿ, ಮಕ್ಕಳ ಸಿನಿಮಾ ವೀಕ್ಷಣೆ, ಮಕ್ಕಳ ತೇರು, ಪರಿಸರದ ಮೇಲಿನ ಉಪನ್ಯಾಸ, 3 ಅಥವಾ 4 ನಾಟಕಗಳ ತಯಾರಿ ಹಾಗೂ ಪ್ರದರ್ಶನ ಮುಂತಾದ ಚಟುವಟಿಕೆಗಳಿರುತ್ತವೆ.
ಶಿಬಿರದ ಅವಧಿಯಲ್ಲಿ ಮಕ್ಕಳು ಸಾಣೇಹಳ್ಳಿಯಲ್ಲಿಯೇ ಇರುವುದು ಕಡ್ಡಾಯವಾಗಿದ್ದು, ಅವರಿಗೆ ಊಟ-ವಸತಿಯ ಸೌಲಭ್ಯವಿದೆ. 10 ರಿಂದ 14 ವರ್ಷ ವಯಸ್ಸಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಬಹುದು. ವಿವರಕ್ಕೆ ಸಂಪರ್ಕಿಸಿ :8861043553, 9972007015.



