Connect with us

Dvgsuddi Kannada | online news portal | Kannada news online

ಸಿರಿಗೆರೆಯಲ್ಲಿ ಫೆ.22ರಿಂದ ಮೂರು ದಿನ ಸರಳ ತರಳಬಾಳು ಹುಣ್ಣಿಮೆ

taralabalu sree 11

ಪ್ರಮುಖ ಸುದ್ದಿ

ಸಿರಿಗೆರೆಯಲ್ಲಿ ಫೆ.22ರಿಂದ ಮೂರು ದಿನ ಸರಳ ತರಳಬಾಳು ಹುಣ್ಣಿಮೆ

ಸಿರಿಗೆರೆ: ಸಿರಿಗೆರೆಯ ತರಳಬಾಳು ಬೃಹನ್ಮಠದ ಈ ಬಾರಿಯ ತರಳಬಾಳು ಹುಣ್ಣಿಮೆ ಮಹೋತ್ಸ ರಾಜ್ಯದಲ್ಲಿ ತೀವ್ರ ಬರ ಹಿನ್ನಲೆ ಸರಳವಾಗಿ ಸಿರಿಗೆರೆಯಲ್ಲಿ ಮೂರು ದಿನ ಸಾಂಪ್ರದಾಯಿಕವಾಗಿ ಆಚರಣೆ ನಡೆಯಲಿದೆ. ಫೆ.22ರಿಂದ 24ರವರೆಗೆ ಸಿರಿಗೆರೆಯ ಬಿ.ಲಿಂಗಯ್ಯ ವಸತಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಹುಣ್ಣಿಮೆ ಮಹೋತ್ಸವದ ಅಂಗವಾಗಿ ಈ ಬಾರಿ ಗ್ರಾಮೀಣ ಯುವ ಕ್ರೀಡಾ ಮೇಳ, ಯುವ ಗೋಷ್ಠಿ, ಮಹಿಳಾ ಗೋಷ್ಠಿ, ತರಳಬಾಳು ವಿಜ್ಞಾನ ಮೇಳ ಮತ್ತು ಹಲವು ಸಾಹಿತ್ಯಕ ಕೃತಿಗಳ ಲೋಕಾರ್ಪಣೆ ನಡೆಯಲಿವೆ. ತರಳಬಾಳು ಪೀಠ ಸಂಸ್ಥಾಪಕರಾದ ವಿಶ್ವಬಂಧು ಮರುಳಸಿದ್ಧರ ಕುರಿತ ನಾಟಕ ಪ್ರದರ್ಶನ ನಡೆಯಲಿದೆ. 24ರಂದು ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ತರಳಬಾಳು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಸದ್ಧರ್ಮ ಸಿಂಹಾಸನಾರೋಣ ಮಾಡಿ ಭಕ್ತರಿಗೆ ಆಶೀರ್ವಚನ ನೀಡುವರು.

2023ರ ಫೆಬ್ರವರಿಯಲ್ಲಿ ವಿಜಯನಗರ ಜಿಲ್ಲೆ ಕೊಟ್ಟೂರಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆದಿತ್ತು. 2024ರಲ್ಲಿ ಮಹೋತ್ಸವ ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿ ನಡೆಯಲಿದೆ ಎಂದು ಘೋಷಿಸಲಾಗಿತ್ತು. ಆದರೆ, ಬರ ಹಿನ್ನಲೆ ಈ ವರ್ಷ ಮುಂದೂಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top