ದಾವಣಗೆರೆ: ಮುಂಬರುವ ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರದುರ್ಗ- ದಾವಣಗೆರೆ ವಿಧಾನ ಪರಿಷತ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಛೇರಿಯಲ್ಲಿ ದಾವಣಗೆರೆ- ಚಿತ್ರದುರ್ಗ ಜಿಲ್ಲೆಗಳ ಹಾಲಿ ಮತ್ತು ಮಾಜಿ ಶಾಸಕರುಗಳು, ಪಕ್ಷದ ಪದಾಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರು, ಶಾಸಕ ಡಾ.ಶಾಮನೂರು ಶಿವಶಂಕರಪ್ಪ , ಶಾಸಕ ರಾಮಪ್ಪ, ಹೆಚ್.ಪಿ.ರಾಜೇಶ್, ಸಲೀಂ ಅಹ್ಮದ್, ಎಚ್. ಆಂಜನೇಯ, ಶಾಸಕ ರಾಮಪ್ಪ, ಚಂದ್ರಪ್ಪ, ಉಮಾಪತಿ, ಗೋವಿಂದಪ್ಪ, ಕೆ.ಎಸ್.ಬಸವಂತ್, ದಿನೇಶ್ ಕೆ.ಶೆಟ್ಟಿ ಉಪಸ್ಥಿತರಿದ್ದರು.



