Connect with us

Dvgsuddi Kannada | online news portal | Kannada news online

ದಾವಣಗೆರೆ: ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚೆ: ಸಿಎಂ ಬಸವರಾಜ ಬೊಮ್ಮಾಯಿ

cm bommai davanagere

ಪ್ರಮುಖ ಸುದ್ದಿ

ದಾವಣಗೆರೆ: ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚೆ: ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ: ಕನಿಷ್ಟ ಬೆಂಬಲ ಬೆಲೆಯಲ್ಲಿ  ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಬಗ್ಗೆ ಜಿಲ್ಲೆಯ ಜಗಳೂರಿನಲ್ಲಿ ಮಾತನಾಡಿದ ಅವರು, ಕೆಲವು ಜಿಲ್ಲೆಗಳಲ್ಲಿ ಹೆಚ್ಚುವರಿ  ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಬಂದಿದೆ. ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಾಷ್ಟ್ರೀಯ ಭಾಷೆ ಹಿಂದಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ , ಬೇರೆ ಯಾವುದೇ ಭಾಷೆ ಅಲ್ಲ. ಭಾಷಾವಾರು ಪ್ರಾಂತ್ಯಗಳಾದ ಮೇಲೆ ಪ್ರಾದೇಶಿಕತೆಗೆ ಮಹತ್ವ  ಎಂದರು. ಪಿಎಸ್‍ಐ ಪರೀಕ್ಷೆ ಅಕ್ರಮದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ, ಈಗ ಸಿಐಡಿಗೆ ವಹಿಸಲಾಗಿದೆ. ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಪ್ರಕರಣವನ್ನು ಸರ್ಕಾರವೇ ಕಂಡುಹಿಡಿದು ತನಿಖೆ ನಡೆಸುತ್ತಿದೆ. ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯಬೇಕು ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top