ದಾವಣಗೆರೆ: ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ.9 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು.
ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 09 ರಂದು ಮಧ್ಯಾಹ್ನ 1.50 ಕ್ಕೆ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿರುವ ಹೆಲಿಪ್ಯಾಡ್ಗೆ ಆಗಮಿಸಿ ಶ್ರೀ ಗುರುಪೀಠದ ವತಿಯಿಂದ ಆಯೋಜಿಸಿರುವ 2023 ನೇ ಮಹರ್ಷಿ ವಾಲ್ಮೀಕಿ ಜಾತ್ರೆ ಮಹೋತ್ಸವ ಹಾಗೂ ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3.30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.



