Connect with us

Dvgsuddi Kannada | online news portal | Kannada news online

ವೀರಶೈವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ‌ ಸ್ಥಾನ ನೀಡಿ; ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷರಿಗೆ ಪತ್ರ

ದಾವಣಗೆರೆ

ವೀರಶೈವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ‌ ಸ್ಥಾನ ನೀಡಿ; ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷರಿಗೆ ಪತ್ರ

ದಾವಣಗೆರೆ: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲಬೇಕಿದ್ದು ಲಿಂಗಾಯತ ಸಮುದಾಯದವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಆಗ್ರಹಿಸಿ ಪಕ್ಷದ ಹಿರಿಯ ಶಾಸಕ ಹಾಗೂ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಲಿಂಗಾಯತ ಸಮುದಾಯದ ಒಬ್ಬರನ್ನು ಕಾಂಗ್ರೆಸ್​ ಪಕ್ಷದಿಂದ ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಪರ ಲಿಂಗಾಯತ ಸಮುದಾಯವು ಹೆಚ್ಚಿನ ಒಲವು ತೊರಿದೆ ಆದ ಕಾರಣ ಸಮುದಾಯದ ಹಿರಿಯ ಶಾಸಕರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ವೀರಶೈವ ಮಹಾಸಭಾದ ಒತ್ತಾಯವಾಗಿದೆ‌. ಹಾಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯವು ಕಾಂಗ್ರೆಸ್ ಕಡೆಗೆ ಒಲವು ತೋರಿಸಿದೆ ಎಂದಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top