ಡಿವಿಜಿ ಸುದ್ದಿ, ದಾವಣಗೆರೆ: ನಗರದಲ್ಲಿ ಕಸ ವಿಲೇವಾರಿಯಲ್ಲಿ ಆಗುತ್ತಿರುವ ವ್ಯತ್ಯಯ ಪರಿಶೀಲಿಸಲು ಪಾಲಿಕೆ ವಿಪಕ್ಷ ಸದಸ್ಯರು ಆವರಗೊಳ್ಳದ ಕಸ ವಿಲೇವಾರಿ ಘಟಕ್ಕೆ ಭೇಟಿ ನೀಡಿದ್ದರು.
ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್ ನೇತೃತ್ವದಲ್ಲಿ ಕಾಂಗ್ರೆಸ್ ಪಾಲಿಕೆ ಸದಸ್ಯರು ಆವರಗೊಳ್ಳ ದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದರು. ನಗರದಲ್ಲಿ ಪ್ರತಿದಿನ 160 ರಿಂದ 165 ಟನ್ ಕಸ ಸಂಗ್ರಹವಾಗುತ್ತಿದ್ದು, ಆದರೆ ಕಳೆದ 15 ದಿನಗಳಿಂದ ಪ್ರತಿದಿನ ಕೇವಲ 120 ರಿಂದ 121 ಟನ್ ಕಸ ಸಂಗ್ರಹವಾಗುತ್ತಿದೆ. ಕಸ ಸರಿಯಾಗಿ ಸಂಗ್ರಹವಾಗದೆ ನಗರದ ಸ್ವಚ್ಛತೆ ಮತ್ತು ನಾಗರಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಎ.ನಾಗರಾಜ್ ತಿಳಿಸಿದರು.

ಆವರಗೊಳ್ಳಕ್ಕೆ ಹೋಗುವ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಭಾರಿ ವಾಹನಗಳ ಮೂಲಕ ಕಸ ಸಾಕಾಣಿಕೆ ತೊಂದರೆಯಾಗುತ್ತಿದ್ದು, ಟ್ರ್ಯಾಕ್ಟರ್ ಗಳ ಮೂಲವೇ ಹೆಚ್ಚು ಕಸ ವಿಲೇವಾರಿ ಮಾಡಬೇಕಾಗುತ್ತಿದೆ. ಈ ಬಗ್ಗೆ ಆರೋಗ್ಯ ಅಧಿಕಾರಿಗಳ ಸಭೆ ಕರೆದು ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಗಡಿ ಗುಡಾಳ್ ಮಂಜುನಾಥ್, ಕೆ. ಚಮನ್ ಸಾಬ್, ಜೆ.ಡಿ. ಪ್ರಕಾಶ್, ವಿನಾಯಕ ಪೈಲ್ವಾನ್, ಸೈಯದ್ ಚಾರ್ಲಿ ಹಾಗೂ ಕಾಂಗ್ರೆಸ್ ಮುಖಂಡ ಉಮೇಶ್ ಉಪಸ್ಥಿತರಿದ್ದರು.



