ದಾವಣಗೆರೆ: ಪ್ರಧಾನಿ ಜನ್ಮದಿನವನ್ನು ನಿರುದ್ಯೋಗಿ ದಿನವನ್ನಾಗಿ ಆಚರಿಸಲು ಕಾಂಗ್ರೆಸ್ ನಿರ್ಧಾರ; ರಕ್ತದಲ್ಲಿ ಪತ್ರ ಬರೆದು ವಿಶ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಆಚರಣೆಯನ್ನು ನಿರುದ್ಯೋಗಿಗಳ ದಿನವಾಗಿ ಆಚರಿಸಲು ದಾವಣಗೆರೆ ಯುವ ಕಾಂಗ್ರೆಸ್ ನಿರ್ಧಾರಿಸಿದೆ. ಈ ಬಗ್ಗೆ ಇಂದು ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದು ಪ್ರಧಾನಿಗೆ ಪೋಸ್ಟ್ ಮಾಡಿದರು.

ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು. Happy Birthday PM Modi. Happy Unemployment Day ಎಂದು ರಕ್ತದಲ್ಲಿ ಪತ್ರ ಬರೆದು ಪೋಸ್ಟ್ ಮಾಡಿದರು. ಸೆಪ್ಟೆಂಬರ್​ 17 ರಂದು ಪ್ರಧಾನಿ ಮೋದಿ ಅವರು 71 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ರಾಜಕೀಯವಾಗಿ ಉನ್ನತ ಹುದ್ದೆಗೇರಿ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ಸೇವಾ ಮತ್ತು ಸಮರ್ಪಣ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಿದೆ.

ಈ ಅಭಿಯಾನ ಸೆಪ್ಟೆಂಬರ್​ 17 ರಿಂದ ಪ್ರಾರಂಭವಾಗಿ, 20 ದಿನಗಳ ಕಾಲ ನಡೆಯಲಿದೆ. ಈ 20 ದಿನಗಳ ಅಭಿಯಾನದ ಪ್ರಯುಕ್ತ ಬಿಜೆಪಿ ದೇಶಾದ್ಯಂದ ಸಾಮೂಹಿಕ ಸ್ವಚ್ಛತಾ ಕೆಲಸ ನಡೆಸಲಿದೆ. ಈ ವೇಳೆ ರಕ್ತದಾನ ಶಿಬಿರ ಸೇರಿ ವಿವಿಧ ಸೇವಾ ಕಾರ್ಯ ಹಮ್ಮಿಕೊಳ್ಳಲಿದೆ. ಈ ದಿನವೇ ದಾವಣಗೆರೆ ಕಾಂಗ್ರೆಸ್ ನಿರುದ್ಯೋಗ ದಿನ ಆಚರಿಸಲಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *