Connect with us

Dvgsuddi Kannada | online news portal | Kannada news online

ದಾವಣಗೆರೆ ಯುವ ಕಾಂಗ್ರೆಸ್ ನಿಂದ ನಿರುದ್ಯೋಗ ದಿನಾಚರಣೆ

ದಾವಣಗೆರೆ

ದಾವಣಗೆರೆ ಯುವ ಕಾಂಗ್ರೆಸ್ ನಿಂದ ನಿರುದ್ಯೋಗ ದಿನಾಚರಣೆ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ದಾವಣಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಿರುದ್ಯೋಗ ದಿನವನ್ನಾಗಿ ಆಚರಿಸಲಾಯಿತು.

ದಾವಣಗೆರೆ ಉತ್ತರ, ದಕ್ಷಿಣ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯಿಂದ  ನಗರದ ಜಯದೇವ ಸರ್ಕಲ್ ಬಳಿ  ಇಂದು ವಿನೂತನವಾಗಿ ಪ್ರತಿಭಟನೆ ನಡೆಸಿದರು.  2014 ರಂದು ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಅವರು, ಯುವಕರಿಗೆ ಉದ್ಯೋಗ ನೀಡುವ ಸುಳ್ಳು ಭಾಷಣ ಮಾಡುತ್ತಿದ್ದು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿದ್ದರು.  ಆದರೆ, ದೇಶದಲ್ಲಿ ನಿರುದ್ಯೋಗ ಸಂಖ್ಯೆ ಹೆಚ್ಚಾಗಿದ್ದು, ಯುವಕರಿಗೆ ಕೆಲಸ ಕೊಡಲು ವಿಫಲವಾಗಿದ್ದಾರೆ  ಎಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷ ನಿಖಿಲ್ ಆರ್ ಕೊಂಡಜ್ಜಿ, ಉಪಾಧ್ಯಕ್ಷ ಸಾಗರ್.ಎಲ್.ಹೆಚ್,  ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸುಭಾನ್ ಖಾನ್,  NSUI ಜಿಲ್ಲಾ ಅಧ್ಯಕ್ಷ  ರಹಮತ್ ಪೈಲ್ವಾನ್, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸದ್ದಾಂ, ರಂಜಿತ್, ಹೆಚ್.ಎಸ್. ವಿನಯ್ ಜೆ ಎಚ್,   ದಾವಣಗೆರೆ ದಕ್ಷಿಣ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ಸೈಯ್ಯದ್ ಇರ್ಫಾನ್, ದಕ್ಷಿಣ ಗ್ರಾಮಾಂತರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್ , ಮಾಯಕೊಂಡ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರು ಸುಹೇಲ್ ಅಹ್ಮದ್,  ಯುವ ಕಾಂಗ್ರೆಸ್ ಮುಖಂಡರು ಚಿರಂಜೀವಿ, ಅವಿನಾಶ್, ವಿನೋದ್ ಕುಂದೂರು, ದಕ್ಷಿಣ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಬಾಷಾ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top