ದಾವಣಗೆರೆ: ಅಡುಗೆ ಅನಿಲ, ಪೆಟ್ರೋಲ್- ಡಿಸೇಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಸೆಪ್ಟೆಂಬರ್ 29ರಂದು ವಿಪಕ್ಷ ನಾಯಕ ಎಸ್.ಸಿದ್ದರಾಮಯ್ಯ, ಮಾಜಿ ಸಚಿವ್ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅಧ್ಯಕ್ಷತ ವಹಿಸಲಿದ್ದು, ಜಿಲ್ಲೆಯ ಹಾಲಿ-ಮಾಜಿ ಶಾಸಕರು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರುಗಳು ಭಾಗವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿಯವರು ತಿಳಿಸಿದ್ದಾರೆ. ಅಂದು ಬೆಳಿಗ್ಗೆ 11.30ಕ್ಕೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಮತ್ತು ಮಾಜಿ ಮುಖ್ಯಮಂತ್ರಿ ಹಿಂದುಳಿದ ವರ್ಗಗಳ ಹರಿಕಾರ ಡಿ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು.ನಂತರ ಮುಖಾಂತರ ಆರಂಭಗೊಳ್ಳುವ ಪ್ರತಿಭಟನೆಯನ್ನು ಉದ್ದೇಶಿಸಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಶಾಸಕರಾದ ಶಾಮನೂರು ಶಿವಶಂಕರಪ್ಪನವರು ಮತ್ತು ಮಾಜಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಮಾತನಾಡುವರು. ನಂತರ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.
ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮುಖಂಡರುಗಳು, ಕಾರ್ಯಕರ್ತರು, ಪಕ್ಷದ ವಿವಿಧ ಘಟಕಗಳಾದ ಎನ್ಎಸ್ಯುಐ, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಜಿಲ್ಲಾ ಸೇವಾದಳ, ಕಿಸಾನ್ ಕಾಂಗ್ರೆಸ್, ಕಾರ್ಮಿಕ ವಿಭಾಗ, ಪರಿಶಿಷ್ಟ ಜಾತಿ, ಪಂಗಡ, ಓ.ಬಿ.ಸಿ. ಅಲ್ಪಸಂಖ್ಯಾತ ವಿಭಾಗದ ಎಲ್ಲಾ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ, ಎಪಿಎಂಸಿ ಸದಸ್ಯರುಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಭಾಗವಹಿಸಬೇಕೆಂದು ಕೋರಲಾಗಿದೆ.



