ಡಿವಿಜಿ ಸುದ್ದಿ, ದಾವಣಗೆರೆ: ದೇಶದಲ್ಲಿ ಜನ ಮತ್ತು ರೈತ ವಿರೋಧಿ ಆಡಳಿತ ನಡೆಯುತ್ತಿದೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ವಿ . ಶಿವಗಂಗಾ ಹೇಳಿದರು.
ನಗರದ ಜಯದೇವ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಿಸಾನ್ ಕಾಂಗ್ರೆಸ್ ದಿವಸವನ್ನು ಆಚರಿಸಿ ಪ್ರತಿಭಟಿಸಲಾಯಿತು. ಈ ವೇಳೆ ಮಾತನಾಡಿದ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ವಿ ಶಿವಗಂಗಾ, ದೇಶದಲ್ಲೇ ಜನ ವಿರೋಧಿ ಹಾಗೂ ರೈತ ವಿರೋಧಿ ಆಡಳಿತ ನಡೆಯುತ್ತಿದೆ. ದೇಶದ ರಾಜಕೀಯ ಇತಿಹಾಸದಲ್ಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಕೆಟ್ಟ ಹಾಗೂ ದುರಾಡಳಿ ನಡೆಸುತ್ತಿದೆ ಎಂದರು.
ಭೂ ಸುಧಾರಣೆ, ವಿದ್ಯುತ್ ಬಿಲ್, ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದು ರೈತರಿಗೆ ಸಂಕಷ್ಟ ತಂದಿದ್ದಾರೆ. ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ.ರೈತರ ಜಮೀನು ಖಾಸಗಿಯವರಿಗೆ ನೀಡಿ ಕೃಷಿಯನ್ನೇ ನಿರ್ಮೂಲನೆಗೆ ಮುಂದಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ ಮಾತನಾಡಿ, ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಶ್ರೀಮಂತರು, ಉದ್ಯಮಿಗಳ ಪರ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ಆಧುನೀಕರಣ ಹೆಸರಲ್ಲಿ ದೇಶವನ್ನೇ ಮಾರಾಟಕ್ಕೆ ಯತ್ನಿಸಲಾಗುತ್ತಿದೆ.ಕೋವಿಡ್ ಹೆಸರಲ್ಲಿ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ.ಪಾರದರ್ಶಕ ಆಡಳಿತವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ದಿನೇಶ್ ಕೆ. ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಮುದ್ದೆಗೌಡರ ಗಿರೀಶ್ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರು ಸೇರಿದಂತ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.



