ದಾವಣಗೆರೆ: ಹಾಲಿ ಶಾಸಕ ಎಸ್‌. ರಾಮಪ್ಪಗೆ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿಯೂ ಟಿಕೆಟ್ ಇಲ್ಲ; ಹೊನ್ನಾಳಿ, ಹರಿಹರ, ಜಗಳೂರು ಅಭ್ಯರ್ಥಿ ಘೋಷಣೆ ಬಾಕಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.ಇದಕ್ಕೂ ಮುನ್ನವ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಇದೀಗ ಎರಡನೇ ಪಟ್ಟಿ ಪ್ರಕಟಿಸಿದ್ದು,  42 ಅಭ್ಯರ್ಥಿಗಳನ್ನು ಘೋಷಿಸಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿಯಿಂದ ಹೊಸ ಮುಖ ಬಸವರಾಜ್ ವಿ .ಶಿವಗಂಗಾಗೆ 2 ನೇ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿದೆ. ಈ ಮೂಲಕ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 4 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾದಂತಾಗಿದೆ. ಹಾಲಿ ಶಾಸಕ ಎಸ್. ರಾಮಪ್ಪ‌ ಪ್ರತಿನಿಧಿಸುವ ಹರಿಹರ, ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಆಕಾಂಕ್ಷಿಯಾಗಿರುವ ಹೊನ್ನಾಳಿ ಹಾಗೂ ಜಗಳೂರು ವಿಧಾಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಉಳಿದಿದೆ. ಮೊದಲ ಪಟ್ಟಿಯಲ್ಲಿ ದಾವಣಗೆರೆ ಉತ್ತರದಿಂದ ಶಾಮನೂರು ಶಿವಶಂಕರಪ್ಪ, ದಕ್ಷಿಣದಿಂದ ಎಸ್ .ಎಸ್. ಮಲ್ಲಿಕಾರ್ಜುನ್ ಹಾಗೂ ಮಾಯಕೊಂಡದಿಂದ ಕೆ.ಎಸ್. ಬಸವಂತಪ್ಪ ಗೆ ಟಿಕೆಟ್ ಘೋಷಣೆಯಾಗಿತ್ತು. ಇನ್ನೂ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ ಒಂದು ಕ್ಷೇತ್ರಕ್ಕೆ ಮಾತ್ರ ಟಿಕೆಟ್ ನೀಡಲಾಗಿದೆ.

ಹಾಲಿ ಶಾಸಕರಿರುವ ಹರಿಹರ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡದಿರುವುದು‌ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಇದುವರೆಗೂ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಇನ್ನೂ 58 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *