ಮಹಿಳೆ ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಶಾಮನೂರು ಶಿವಶಂಕರಪ್ಪ ವಿರುದ್ಧ ಬ್ಯಾಡ್ಮಿಂಟನ್ ಪಟು ಸೈನಾ ನೆಹ್ವಾಲ್ ಕಿಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ರಾಜಕೀಯ ನಾಯಕರ ಆರೋಪ-ಪ್ರತ್ಯರೋಪ ಸಾಮಾನ್ಯ. ಆದರೆ, ಕೆಲಮೊಮ್ಮೆ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ವೈರಲ್ ಆಗುವವರೂ ಇದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ‌ ಮಹಿಳೆ ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಹೇಳುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಈ ಕುರಿತಾಗಿ ಭಾರತದ ತಾರಾ ಬ್ಯಾಡ್ಮಿಂಟನ್ ಪಟು ಸೈನಾ ನೆಹ್ವಾಲ್, ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಭಾರತೀಯ ಜನತಾ ಪಕ್ಷವು ದಾವಣಗೆರೆ ಕ್ಷೇತ್ರಕ್ಕೆ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಗಾಯಿತ್ರಿ ಸಿದ್ದೇಶ್ವರ್ ಅವರ ಹೆಸರನ್ನು ಘೋಷಿಸಿತ್ತು. ಈ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ, ಅಡುಗೆ ಮಾಡುವುದಕ್ಕೆ ಲಾಯಕ್ಕು. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಶಕ್ತಿ ಅವರಿಗಿಲ್ಲ ಎಂದಿದ್ದಾರೆ. ರಾಜಕೀಯಕ್ಕೆ ಬಂದ ಮೇಲೆ ಹೇಗೆ ಮಾತನಾಡಬೇಕು ಎಂದು ಗೊತ್ತಿರಬೇಕು. ಆದರೆ ಅವರಿಗೆ ಮನೆಯೊಳಗೆ ಅಡುಗೆ ಮಾಡುವುದಕ್ಕಷ್ಟೇ ಬರುತ್ತೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದೀಗ ಈ ಕುರಿತಂತೆ ಸಾಮಾಜಿಕ ಜಾಲತಾಣವಾದ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಸೈನಾ ನೆಹ್ವಾಲ್, ಮಹಿಳೆಯನ್ನು ಅಡುಗೆ ಕೋಣೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಕರ್ನಾಟಕದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ಮೇಲಿನ ಈ ಸೆಕ್ಸಿಸ್ಟ್ ಹೇಳಿಕೆ ಬಗ್ಗೆ ಪಕ್ಷವೂ ಲಡ್ಕಿ ಹೂಂ ಲಡ್‌ ಸಕ್ತಿ ಹೂಂ(ನಾನು ಹುಡುಗಿಯಿರಬಹುದು, ಆದ್ರೆ ಹೋರಾಡುತ್ತೇನೆ) ಎನ್ನುವ ಕನಿಷ್ಠ ಬೆಂಬಲವನ್ನಾದರೂ ನೀಡಬೇಕು ಎನ್ನುವ ನಿರೀಕ್ಷಿಸುತ್ತೇನೆ.

 

 

ನಾನು ದೇಶಕ್ಕಾಗಿ ಹೋರಾಡಿ ಪದಕ ಗೆದ್ದಾಗ, ನಾನು ಏನು ಮಾಡಬೇಕೆಂದು ಕಾಂಗ್ರೆಸ್ ಪಕ್ಷ ಆದ್ಯತೆ ನೀಡುತ್ತಿತ್ತು?. ಮತ್ತೆ ಯಾಕಾಗಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರು ತಾವು ಬಯಸಿದ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಲು ಕನಸು ಕಾಣಿರಿ ಎಂದು ಹೇಳಬೇಕು. ಒಂದು ಕಡೆ ನಾವು ನಾರಿ ಶಕ್ತಿಗೆ ನಮನ ಸಲ್ಲಿಸುತ್ತೇವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಕಾಯ್ದೆಯನ್ನು ಪಾಸ್ ಮಾಡಲಾಗಿದೆ. ಮತ್ತೊಂದೆಡೆ ಈ ನಾರಿಶಕ್ತಿಗೆ ಅವಮಾನ ಮಾಡುವ ಕೆಲಸ ಆಗುತ್ತಿದೆ. ನಮ್ಮ ನಡುವೆ ಎಂತಹ ಜನರಿದ್ದಾರೆ ಎಂದು ಸೈನಾ ಆಕ್ರೋಶ ಹೊರಹಾಕಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *