ದಾವಣಗೆರೆ : ದಾವಣಗೆರೆ ಜಿಲ್ಲೆಯಾದ್ಯಂತ ಸರ್ಕಾರವು ಉಲ್ಲೇಖಿತ ದಿನಾಂಕ 21.01.2022ರ ಆದೇಶದೊಂದಿಗೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲಾಗಿದ್ದು, ವಾರಂತ್ಯದ ಕರ್ಫ್ಯೂ ಹಿಂಪಡೆಯಲಾಗಿದೆ. ಆದರೆ, ರಾತ್ರಿ ಕಫ್ರ್ಯೂ ಮಾತ್ರ – ವಾರದ ಎಲ್ಲಾ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಜಿಲ್ಲೆಯಲ್ಲಿ ಯಾವುದೇ ಧರಣಿ, ಪ್ರತಿಭಟನೆ, ರ್ಯಾಲಿ, ಉತ್ಸವ, ಜಾತ್ರೆಗಳಿಗೆ ಅವಕಾಶವಿರುವುದಿಲ್ಲ. ಮದುವೆಗಳಲ್ಲಿ ಹೊರಾಂಗಣದಲ್ಲಿ ಗರಿಷ್ಠ 200, ಒಳಾಂಗಣದಲ್ಲಿ ಗರಿಷ್ಠ 100 ಜನ ಮಾತ್ರ ಭಾಗವಹಿಸಲು ಅವಕಾಶವಿದೆ. ದೇವಾಲಯಗಳಲ್ಲಿಯೂ ಕೂಡ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿದೆ. ಸಾರ್ವಜನಿಕರು ತಪ್ಪದೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ ಸಾರ್ವಜನಿಕರು ತಪ್ಪದೇ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು. ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಸಿದ್ದಾರೆ.



