ದಾವಣಗೆರೆ: 2335 ಮಾಸ್ಕ್ ಪ್ರಕರಣ; 15 ಲಾಕ್ ಡೌನ್ ಉಲ್ಲಂಘನೆ ಪ್ರಕರಣ ದಾಖಲು; ಎಸ್ ಪಿ  ಹನುಮಂತರಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ಹೊಸ ಮಾರ್ಗಸೂಚಿಗಳನ್ನು ಪಾಲಿಸಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಕಳೆದ ಒಂದು ವಾರದಲ್ಲಿ 2335 ಮಾಸ್ಕ್ ಪ್ರಕರಣ. ಲಾಕ್‍ಡೌನ್ ಉಲ್ಲಂಘನೆಯ 15 ಪ್ರಕರಣವನ್ನು ಎಪಿಡೆಮಿಕ್ ಕಾಯ್ದೆ ಅಡಿ ದಾಖಲಿಸಲಾಗಿದೆ. ಇದರಲ್ಲಿ ರೆಮಿಡಿಸಿವರ್ ಲಸಿಕೆ ಅಕ್ರಮ ಸಂಗ್ರಹ ಮತ್ತು ಮಾರಾಟದ ಕುರಿತು 02 ಪ್ರಕರಣ ದಾಖಲಾಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರ ಹನುಮಂತರಾಯ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ ಈ ಮಾಹಿತಿ ನೀಡಿದರು. ಇದಕ್ಕೆ ಸಚಿವರು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆ ಆಗದಂತೆ ಸ್ಥಳೀಯವಾಗಿ ಕ್ರಮ ಜರುಗಿಸಬೇಕು. ಅವಶ್ಯಕತೆ ಇರುವವರಿಗೆ ಗ್ರೀನ್ ಕಾರ್ಡ್ ನೀಡಬೇಕು. ತಾಲ್ಲೂಕುಗಳಲ್ಲಿ ನೋಡಲ್ ಅಧಿಕಾರಿಗಳಾಗಿರುವ ತಹಶೀಲ್ದಾರರು ತಾಲ್ಲೂಕಿನಾದ್ಯಂತ ಸಂಚರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಪ್ರವೇಶ ಮತ್ತು ಟೋಲ್, ಹೊರಹೋಗುವ ದಾರಿಗಳಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸುವಂತೆ ಹಿಂದಿನ ಸಭೆಯಲ್ಲಿ ತಿಳಿಸಿದ್ದು ಈ ಬಗ್ಗೆ ಕೇಳಿದಾಗ ಎಸ್‍ಪಿ ಯವರು, ಹೆಬ್ಬಾಳ ಟೋಲ್ ಮತ್ತು ದಾವಣಗೆರೆ ಪ್ರವೇಶ, ನ್ಯಾಮತಿ ಹೊನ್ನಾಳಿಯಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಿ ಕ್ರಮ ವಹಿಸಲಾಗುತ್ತಿದೆ  ಎಂದರು.

ಬೆಡ್  ಆಕ್ಸಿಜನ್ ವಿವರ: ನಗರದಲ್ಲಿ 2425 ಕೋವಿಡ್ ರೋಗಿಗಳಿಗೆ ಬೆಡ್ ಮೀಸಲಿಟ್ಟಿದ್ದು, ಈ ಪೈಕಿ 515 ಭರ್ತಿಯಾಗಿದ್ದು 1908 ಖಾಲಿ ಇವೆ. ಸಿಜಿ ಆಸ್ಪತ್ರೆಯಲ್ಲಿ 181, ಎಸ್‍ಎಸ್ ಆಸ್ಪತ್ರೆಯಲ್ಲಿ 128, ಬಾಪೂಜಿಯಲ್ಲಿ 76 ಮತ್ತು ಸಿಟಿ ಸೆಂಟರ್‍ನಲ್ಲಿ 10 ಜನ ರೋಗಿಗಳು ಇದ್ದು ಒಟ್ಟಾರೆ 282 ಜನರು ಆಕ್ಸಿಜನ್ ಸಹಾಯ ಪಡೆದಿದ್ದರೆ 179 ಆಸ್ಪತ್ರೆಯಲ್ಲೇ ಐಸೋಲೇಟ್ ಆಗಿದ್ದಾರೆ. ಹೋಮ್ ಐಸೋಲೇಷನ್‍ನಲ್ಲಿ 937 ಜನರಿದ್ದು ಇವರ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ  ಮಾಹಿತಿ ನೀಡಿದರು.

ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಹರಿಹರ, ಜಗಳೂರು ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಸಚಿವರು ಮಾತನಾಡಿ ತಾಲ್ಲೂಕುಗಳಲ್ಲಿ ಕೋವಿಡ್ ವಸ್ತುಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡು ತಾಲ್ಲೂಕುಗಳಲ್ಲಿ ರೈತರ ಚಟುವಟಿಕೆ ಮತ್ತು ಹರಿಹರದಂತಹ ತಾಲ್ಲೂಕಿನಲ್ಲಿ ಕೈಗಾರಿಕೆ ಚಟುವಟಿಕೆ ಇತರೆ ಕಟ್ಟಡ ಕಾಮಗಾರಿಗಳಿಗೆ ತೊಂದರೆ ಆಗದಂತೆ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು. ಜೊತೆಗೆ ತಾಲ್ಲೂಕು ಟಾಸ್ಕ್‍ಫೋರ್ಸ್, ಗ್ರಾ.ಪಂ ಹಾಗೂ ಬೂತ್ ಮಟ್ಟದಲ್ಲಿ ಟಾಸ್ಕ್‍ಫೋರ್ಸ್ ಸಮಿತಿಗಳು ಸಕ್ರಿಯವಾಗಿ ಕೋವಿಡ್ ನಿರ್ವಹಣೆಯಲ್ಲಿ ಪಾಲ್ಗೊಳ್ಳಬೇಕು. ಪಿಡಿಓ, ಆಶಾ, ಅಂಗನವಾಡಿ ಸೇರಿದಂತೆ ಹಿಂದೆ ಸಕ್ರಿಯವಾಗಿದ್ದ ಎಲ್ಲ ಸಿಬ್ಬಂದಿಗಳನ್ನೊಳಗೊಂಡು ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು.

ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಮಾತನಾಡಿ, ನಗರವನ್ನು ಮೂರು ವಲಯಗಳನ್ನಾಗಿ ವಿಂಗಡಿಸಿ ಮೂರು ತಂಡಗಳನ್ನು ರಚಿಸಿ ಕೋವಿಡ್ ನಿಯಮ ಉಲ್ಲಂಘನೆ ಬಗ್ಗೆ ಕ್ರಮ ವಹಿಸಲಾಗುತ್ತಿದೆ. 45 ವಾರ್ಡುಗಳಲ್ಲಿ ತಳ್ಳುಗಾಡಿಗಳ ಮೂಲಕ ತರಕಾರಿ ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದುವರೆಗೆ ನಿಯಮ ಉಲ್ಲಂಘಿಸಿದ ಬಟ್ಟೆ ಸೇರಿದಂತೆ ಇತರೆ ಅಂಗಡಿಗಳಿಗೆ ರೂ.1,84,800 ದಂಡ ವಿಧಿಸಲಾಗಿದ್ದು, ಮಾಸ್ಕ್ ಧರಿಸದೇ ಇರುವವರಿಂದ ರೂ.67,350 ದಂಡ ಸಂಗ್ರಹಿಸಲಾಗಿದೆ ಎಂದರು.

ಸಚಿವರು ಮಾತನಾಡಿ, ಇದೊಂದು ಸಂದಿಗ್ಧ ಪರಿಸ್ಥಿತಿಯಾಗಿದ್ದು, ಅಧಿಕಾರಿಗಳು ಯಾವುದೇ ಮುಲಾಜಿಗೆ ಗುರಿಯಾಗದೇ ಎಚ್ಚರಿಕೆಯಿಂದ ಕೋವಿಡ್ ನಿರ್ವಹಣೆ ಕೆಲಸ ಮಾಡಬೇಕು. ಹಾಗೂ ರೋಗಿಗಳು, ಮತ್ತಾರಿಂದಲೂ ದೂರುಗಳು ಬಾರದಂತೆ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿಕೊಂಡು ಹೋಗಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್‍ಎಲ್‍ಓಗಳಾದ ರೇಷ್ಮಾ ಹಾನಗಲ್, ಸರೋಜ, ತಹಶೀಲ್ದಾರ್ ಗಿರೀಶ್, ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ, ಡಾ. ನಟರಾಜ್, ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಯತೀಶ್, ಟಿಹೆಚ್‍ಓ ಡಾ.ವೆಂಕಟೇಶ್, ಇತರೆ ಅಧಿಕಾರಿಗಳು ಇದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *