Connect with us

Dvgsuddi Kannada | online news portal | Kannada news online

ದಾವಣಗೆರೆ: ಕೋವಿಡ್ ನಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡವರು1 ಲಕ್ಷ ಪರಿಹಾರ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಕೋವಿಡ್ ನಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡವರು1 ಲಕ್ಷ ಪರಿಹಾರ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ಕೋವಿಡ್-19 ಸೋಂಕಿನಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ  ಅರ್ಜಿ ಆಹ್ವಾನಿಸಿದೆ.

ಸಂತ್ರಸ್ಥ ಕುಟುಂಬದವರು, ಈ ಕುರಿತಂತೆ ಅರ್ಜಿಯನ್ನು ತಾಲ್ಲೂಕು ಕಚೇರಿಯಲ್ಲಿ ಅಥವಾ ತಮ್ಮ ವ್ಯಾಪ್ತಿಯ ನಾಡಕಚೇರಿಯಲ್ಲಿ ನಿಗದಿತ ನಮೂನೆ-1 ಅನ್ನು ಪಡೆದುಕೊಂಡು, ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ವ್ಯಾಪ್ತಿಯ ನಾಡ ಕಚೇರಿಯಲ್ಲಿ ಸಲ್ಲಿಸುವಂತೆ ಕೋರಲಾಗಿದೆ. ಈಗಾಗಲೇ ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಅರ್ಜಿ ಸಲ್ಲಿಸುವವರು ಕೋವಿಡ್-19 ಪಾಸಿಟಿವ್ ಅಥವಾ ನೆಗೆಟಿವ್ ರಿಪೋರ್ಟ್, ರೋಗಿ ಸಂಖ್ಯೆ ಪಿ-ನಂಬರ್, ಕ್ಲೀನಿಕಲ್ ರೇಡಿಯಾಲಜಿ ಮತ್ತು ಪ್ರಯೋಗಾಲಯ ವರದಿ ವೈದ್ಯರಿಂದ ದೃಢೀಕರಿಸಿರಬೇಕು, ಮೃತಪಟ್ಟ ವ್ಯಕ್ತಿಯ ಆಧಾರ್ ಕಾರ್ಡ್, ಮರಣ ಪ್ರಮಾಣ ಪತ್ರ, ಅರ್ಜಿದಾರರ ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನಮೂನೆ-2 ರಲ್ಲಿ ಸ್ವಯಂ ಘೋಷಣಾ ಪತ್ರ, ನಮೂನೆ-3 ರಲ್ಲಿ ಕುಟುಂಬ ಸದಸ್ಯರ ನಿರಾಕ್ಷೇಪಣಾ ಪತ್ರ ಸಲ್ಲಿಸಬೇಕೆಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಬಿ.ಎನ್.ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top