ವಾರಕ್ಕೆ ಆಗುವಷ್ಟು ತರಕಾರಿ ಒಂದೇ ಸಲ ತೆಗೆದುಕೊಂಡು ಹೋಗಿ: ಸಂಸದ ಜಿ.ಎಂ ಸಿದ್ದೇಶ್ವರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಾರ್ವಜನಿಕರು ವಾರಕ್ಕೆ ಆಗುವಷ್ಟು ತರಕಾರಿ, ರೇಷನ್ ಒಂದೇ ಸಲ ತೆಗೆದು ಹೋಗಬೇಕು. ಪ್ರತಿ ದಿನ ಮನೆಯಿಂದ ಹೊರಗೆ ಬರಬೇಡಿ ಎಂದು ಸಂಸದ ಜಿ.ಎಂ ಸಿದ್ದೇಶ್ವರ ಹೇಳಿದರು

ಜಿಲ್ಲಾಸ್ಪತ್ರೆಯಲ್ಲಿನ ಆಕ್ಸಿಜನ್ ಘಟಕ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಬರಬೇಕಾದ್ರೆ ಜನರ ರಶ್ ಕಡಿಮೆ ಆಗಬೇಕು.  ಜನರು ಪ್ರತಿ ದಿನ ಮಾರುಕಟ್ಟೆಗೆ  ರೇಷನ್ ಕೊಳ್ಳಲು ಬಂದ್ರೆ, ಕೊರೊನಾ ನಿಯಂತ್ರಣಕ್ಕೆ ಬರಲ್ಲ.  ಹೀಗಾಗಿ ಜನರು ಒಂದು ವಾರಕ್ಕೆ ಆಗುವಷ್ಟು ಅಗತ್ಯ ವಸ್ತುಗಳನ್ನು ಒಮ್ಮೆಲೇ ತೆಗೆದುಕೊಂಡು ಹೋಗುವುದು ಉತ್ತಮ ಎಂದು ತಿಳಿಸಿದರು.

ನಿಮ್ಮ ಜೀವ ಉಳಿಯಬೇಕಾದ್ರೆ, ಆದಷ್ಟು ಹೊರಗೆ ಬರುವುದನ್ನು ಕಡಿಮೆ. ಸಾಮಾಜಿಕ ಅಂತರ, ಮಾಸ್ಕ್, ಸಾನಿಟೈಸರ್ ಉಪಯೋಗಿಸಿ.  ನಿಮ್ಮ ಜೀವ ಉಳಿಸಲು ಜಿಲ್ಲಾಡಳಿತ ಶ್ರಮಿಸುತ್ತಿದೆ. ನಿಮ್ಮಲ್ಲಿ ಕೈಮಗಿದು ಕೇಳಿಕೊಳ್ಳುತ್ತೇನೆ ಒಂದು ವಾರಕ್ಕೆ ಆಗುವಷ್ಟು ಅಗತ್ಯ ವಸ್ತುಗಳನ್ನು ಒಮ್ಮೆಲೇ ತೆದುಕೊಂಡು ಹೋಗಿ ಸಾಮಾಜಿಕ ಅಂತರ ಕಾಪಾಡಿ ಎಂದು ಸಲಹೆ ನೀಡಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *