ದಾವಣಗೆರೆ: ಆಕ್ಸಿಜನ್ ಉಸ್ತುವಾರಿಗೆ ತಂಡಗಳ ರಚನೆ; ಖಾಸಗಿ ಆಸ್ಪತ್ರೆಗಳ ಬೆಡ್ ದರ ಪರಿಷ್ಕರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೋವಿಡ್ 19 ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳ ಹಿನ್ನೆಲೆ ಸರ್ಕಾರ  ಖಾಸಗಿ ಆಸ್ಪತ್ರೆಗಳ ಬೆಡ್  ದರ ಹೊಸದಾಗಿ ನಿಗದಿ ಮಾಡಿದೆ.

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಪಿಪಿಇ ಹಾಗೂ ಪರಿಕರಗಳನ್ನು ಒಳಗೊಂಡಂತೆ ಬೆಡ್ ದರ ನಿಗದಿಪಡಿಸಿದ್ದು, ಸಾರ್ವಜನಿಕ ಆರೋಗ್ಯ ಪ್ರಾಧಿಕಾರದಿಂದ ಶಿಫಾರಸಿನಂತೆ ದಿನವೊಂದಕ್ಕೆ ದರ ಪರಿಷ್ಕರಿಸಲಾಗಿದೆ. ಇಂದಿನಿಂದಲೇ (ಮೇ .06) ದರ ಅನ್ವಯವಾಗಲಿದೆ.

  • ನೂತನ ದರ:
  •  ಜನರಲ್ ವಾರ್ಡ್ ರೂ.5200
  •  ಹೆಚ್‍ಡಿಯು ರೂ.8000
  •  ಐಸೊಲೇಷನ್ ಐಸಿಯು ವೆಂಟಿಲೇಟರ್‍ರಹಿತ ರೂ.9750
  • ಐಸೊಲೇಷನ್ ಐಸಿಯು ವೆಂಟಿಲೇಟರ್‍ಸಹಿತ ರೂ.11500

ಈ ಆದೇಶವನ್ನು ಖಾಸಗಿ ಆಸ್ಪತ್ರೆಗಳು ಪಾಲಿಸದಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ (51 ರಿಂದ 60) ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಶಿಕ್ಷಾರ್ಹವಾಗಿರುತ್ತದೆ. ಇದಲ್ಲದೇ ಸಂಬಂಧಪಟ್ಟ ಭಾರತೀಯ ದಂಡನಾ ಕಾಯ್ದೆಯ ಸೂಕ್ತ ಸೆಕ್ಷನ್‍ಗಳಡಿಯಲ್ಲಿ ಶಿಕ್ಷಾರ್ಹವಾಗಿರುತ್ತದೆ ಮತ್ತು ಇತರೆ ಕಾನೂನುಗಳು ಅನ್ವಯಿಸುತ್ತವೆ. ಖಾಸಗಿ ಈ ದರಕ್ಕಿಂತ ಹೆಚ್ಚು ವಸೂಲಿ ಮಾಡಿದಲ್ಲಿ ಡಿಹೆಚ್‍ಓ ರವರಿಗೆ ದೂರು ನೀಡಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾದಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಆಕ್ಸಿಜನ್ ಉಸ್ತುವಾರಿ ತಂಡ : ಕೋವಿಡ್ 19 ಎರಡನೇ ಅಲೆಯ ಚಿಕಿತ್ಸೆಗೆ ಅತ್ಯಗತ್ಯವಾಗಿರುವ ಆಕ್ಸಿಜನ್ ಪೂರೈಕೆ, ಬೇಡಿಕೆ ಮತ್ತು ಲಭ್ಯತೆ ಕುರಿತು ದಿನದ 24 ಗಂಟೆ ಪರಿವೀಕ್ಷಣೆ ಮಾಡಲು ಮೂರು ಆಕ್ಸಿಜನ್ ಉಸ್ತುವಾರಿ ತಂಡಗಳನ್ನು ನಿಯೋಜಿಸಲಾಗುವುದು. ಇಬ್ಬರು ಅಧಿಕಾರಿಗಳು ಮತ್ತು ಇಬ್ಬರು ಸಹಾಯಕರನ್ನೊಳಗೊಂಡ 8 ಅವಧಿಯ ಮೂರು ಶಿಫ್ಟ್‍ಗಳಲ್ಲಿ ಕೆಲಸ ಮಾಡುವ ತಂಡಗಳನ್ನು ನಿಯೋಜಿಸಲಾಗುವುದು.

ಇಂದಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆಕ್ಸಿಜನ್‍ನ್ನು ಎಲ್ಲೂ ವ್ಯರ್ಥ ಮಾಡದಂತೆ, ನ್ಯಾಯಯುತವಾಗಿ ಬಳಕೆ ಮಾಡುವ ಬಗ್ಗೆ ಹಾಗೂ ಉಸ್ತುವಾರಿ ಮಾಡುವ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *