Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದಿನಿಂದಲೇ ಮಾಸ್ಕ್ ಹಾಕದವರಿಗೆ ಸಾವಿರ ರೂಪಾಯಿ ದಂಡ ; ಎಸ್ ಪಿ ಹನುಮಂತರಾಯ

ದಾವಣಗೆರೆ

ದಾವಣಗೆರೆ: ಇಂದಿನಿಂದಲೇ ಮಾಸ್ಕ್ ಹಾಕದವರಿಗೆ ಸಾವಿರ ರೂಪಾಯಿ ದಂಡ ; ಎಸ್ ಪಿ ಹನುಮಂತರಾಯ

ಡಿವಿಜಿ ಸುದ್ದಿ, ದಾವಣಗೆರೆ: ಮಾಸ್ಕ್ ಹಾಕದವರಿಗೆ ನಗರ ಪ್ರದೇಶದಲ್ಲಿ1000 ರೂಪಾಯಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂಪಾಯಿ ದಂಡ ವಿಧಿಸುವಂತೆ ಸರ್ಕಾರದಿಂದ ಆದೇಶ ಬಂದಿದೆ. ಹೀಗಾಗಿ ಇಂದಿನಿಂದಲೇ ಮಾಸ್ಕ್ ಹಾಕದವರಿಗೆ ದಂಡ ಹಾಕಲಾಗುವುದು ಎಂದು ಎಸ್.ಪಿ. ಹನುಮಂತರಾಯ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಎಲ್ಲ ಕಡೆ ಹರಡುತ್ತಿರುವುದರಿಂದ ನಿಯಂತ್ರಣಕ್ಕೆ ತರಲು ಸರ್ಕಾರ ಮಾಸ್ಕ್ ಕಡ್ಡಾಯ ಮಾಡಿದೆ. ಮಾಸ್ಕ್ ಹಾಕದೇ ಓಡಾಡುವರಿಗೆ ನಗರ ಪ್ರದೇಶದಲ್ಲಿ  ಒಂದು ಸಾವಿರ ರೂಪಾಯಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ದಂಡ ವಿಧಿಸಲಾಗುವುದು.

ಸರ್ಕಾರ ಕಟ್ಟುನಿಟ್ಟಾಗಿ ಆದೇಶ ಹೊರಡಿಸಿದ್ದು, ಎಲ್ಲ ಸರ್ಕಾರದ ಆದೇಶವನ್ನು ಪಾಲಿಸಬೇಕಿದೆ. ನಿನ್ನೆ ಸರ್ಕಾರದ ಆದೇಶ ನಮ್ಮ ಕೈ ಸೇರಿದೆ. ಇಂದಿನಿಂದಲೇ ದಂಡ ವಿಧಿಸಲಾವುದು. ಸಾರ್ವಜನಿಕರು ದಂಡ ಹಾಕುವುದಕ್ಕೆ ಅನುವು ಮಾಡಿಕೊಡದೇ, ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದರು.

ಮೇಯರ್ ಅಜಯ್ ಕುಮಾರ್ ಮಾತನಾಡಿ, ಕೊರೊನಾದಿಂದ ಸಾಕಷ್ಟು ಜನ ಮೃತಪಟ್ಟಿದ್ದಾರೆ. ಹೀಗಾಗಿ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿದೆ. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಮಾಸ್ಕ್ ಹಾಕುವುದರಿಂದ ನಿಮಗೆ ಏನು ತೊಂದರೆ ಆಗುತ್ತದೆ. ಇದನ್ನು ವಿರೋಧಿಸುವುದು ಬೇಡ. ಜನರಿಗೋಸ್ಕಾರ ಸರ್ಕಾರ ಕಾನೂನು ಜಾರಿಗೆ ತಂದಿದೆ. ಇದನ್ನು ಪ್ರತಿಯೊಬ್ಬರು ಪಾಲಿಸಬೇಕಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top