ದಾವಣಗೆರೆ: ಕಮ್ಯೂನಿಸ್ಟ್‌ ಪಕ್ಷದ ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ ನಿಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಸಹಕಾರ್ಯದರ್ಶಿ, ಹಿರಿಯ ಕಾರ್ಮಿಕ ಮುಖಂಡ ಹೆಚ್.ಕೆ. ರಾಮಚಂದ್ರಪ್ಪ (78) ಇಂದು (ಮೇ.08) ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ರಾಮಚಂದ್ರಪ್ಪ ಅವರು ಎಐಟಿಯುಸಿ ಕಾರ್ಯಾಧ್ಯಕ್ಷರಾಗಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೇ 9ರಂದು ಮಧ್ಯಾಹ್ನ 12ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

  • 1975ರಲ್ಲಿ ದಾವಣಗೆರೆ ನಗರಸಭೆ ಉಪಾಧ್ಯಕ್ಷ
  • 1984ರಲ್ಲಿ ನಗರಸಭೆ ಅಧ್ಯಕ್ಷ
  • ಭಾರತ ಕಮ್ಯೂನಿಸ್ಟ್ ಪಕ್ಷದ ಸಂಘಟನೆ ಸಕ್ರಿಯ
  • ಅನೇಕ ಕಾರ್ಮಿಕ ಸಂಘಟನೆಗಳು, ಸಂಘ ಸಂಸ್ಥೆಗಳಲ್ಲಿ ತೊಡಗಿಕೊಂಡಿದ್ದರು.

ದುಡಿಯುವ ಜನತೆಯ ಹೋರಾಟಕ್ಕೆ ತಮ್ಮನ್ನು ಅರ್ಪಿಸಿಕೊಂಡಿದ್ದ ಎಚ್.ಕೆ.ಆರ್ ಎಂದೇ ಹೆಸರಾಗಿದ್ದ ರಾಮಚಂದ್ರಪ್ಪನವರು ದಶಕಗಳ ಕಾಲ ಜೈಲುವಾಸ ಅನುಭವಿಸಿದವರು. ಕಾಮ್ರೇಡ್ ಪಂಪಾಪತಿ ಅವರ ನಂತರ ದಾವಣಗೆರೆ ನಗರ ಪಾಲಿಕೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎಚ್.ಕೆ.ಆರ್ ಕೊನೆಯುಸಿರು ಇರುವವರೆಗೆ ಕೆಂಬಾವುಟ ಕ್ಕಾಗಿ ದುಡಿದಿದ್ದರು.

ಸಂತಾಪ:ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕರು, ಅಸಂಘಟಿತ ವರ್ಗದ ದುಡಿಯುವ ಜನರ ಹೋರಾಟಗಳಿಗೆ ದೊಡ್ಡ ಶಕ್ತಿಯಾಗಿದ್ದ ಹಾಗೂ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಮಾರ್ಗದರ್ಶಕರಾಗಿದ್ದ ಕಾಂII ಹೆಚ್.ಕೆ.ರಾಮಚಂದ್ರಪ್ಪ ಅವರ ನಿಧನಕ್ಕೆ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ.ಆನಂದ ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹೆಚ್.ಕೆ.ರಾಮಚಂದ್ರಪ್ಪ ಅವರು ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು, ಆಶಾ ಕಾರ್ಯಕರ್ತರ ಸಂಘಟನೆ ಹಾಗೂ ಇನ್ನೂ ಹಲವಾರು ಕಾರ್ಮಿಕ ಸಂಘಟನೆಗಳಿಗೆ ಧ್ವನಿಯಾಗಿ ತಮ್ಮ ಜೀವನವನ್ನೇ ಕಾರ್ಮಿಕರ ಪರವಾದ ಹೋರಾಟಗಳಿಗೆ ಸಮರ್ಪಿಸಿಕೊಂಡಿದ್ದರು. ಅವರ ಅಗಲುವಿಕೆ ಕಾರ್ಮಿಕ ವರ್ಗಕ್ಕೆ ದೊಡ್ಡ ನಷ್ಟವಾಗಿದೆ ಎಂದಿದ್ದಾರೆ.

ಹೆಗಲ ಮೇಲೊಂದು ಕೆಂಪು ಶಾಲು ಹಾಕಿಕೊಂಡು ಇಳಿ ವಯಸ್ಸಿನಲ್ಲೂ ಸದಾ ಲವಲವಿಕೆಯಿಂದ ಓಡಾಡುತ್ತಿದ್ದ ರಾಮಚಂದ್ರಪ್ಪ. ಮಾಜಿ ಶಾಸಕ ಪಂಪಾಪತಿಯವರ ಕಾಲದಿಂದಲೂ ಕಮ್ಯುನಿಷ್ಟ್ ಪಕ್ಷದ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿದ್ದ ರಾಮಚಂದ್ರಪ್ಪ ಕೊನೆಯ ಉಸಿರಿರುವ ತನಕ ಕಮ್ಯುನಿಷ್ಟ್ ಆಗಿ ಉಳಿದಿದ್ದು ಇನ್ನು ಇತಿಹಾಸ ಅಲ್ಲವೇ?
ಕಮ್ಯುನಿಷ್ಟ್ ತತ್ವಾದರ್ಶ ಬಿಟ್ಟು ಬಾರದ ಕಾಂಮ್ರೇಡ್.ನಾವುಗಳು ಚಿಕ್ಕಂದಿನಿಂದಲೂ ನಾಯಕನಾಗಿ ನೋಡಿದ್ದು ಹೆಚ್ಕೆಆರ್ ಮಾತ್ರ.
ಶೋಷಿತರ ಗಟ್ಟಿ ಧ್ವನಿಯಾಗಿ ಈಗ ಬಾರದ ಲೋಕಕ್ಕೆ ತೆರಳಿದ್ದಾರೆ.ನಿಮಗೊಂದು ಲಾಲ್ ಸಲಾಂ ಹೋಗಿ ಬನ್ನಿ…… ಎಂದು ಶೋಷಿತ ವರ್ಗಗಳ ಒಕ್ಕೂಟ ಜಿಲ್ಲಾಧ್ಯಕ್ಷ‌ ಬಾಡದ ಆನಂದರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *