Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾಮ ದೇವತೆ ಜಾತ್ರೆ ದಿನವೇ ಪತ್ನಿ ಕೊಂದ ಪತಿ; ಕಂಠಪೂರ್ತಿ ಕುಡಿದು ಹಲ್ಲೆ‌ ನಡೆಸಿ ಕೊಲೆ..!!

death

ದಾವಣಗೆರೆ

ದಾವಣಗೆರೆ: ಗ್ರಾಮ ದೇವತೆ ಜಾತ್ರೆ ದಿನವೇ ಪತ್ನಿ ಕೊಂದ ಪತಿ; ಕಂಠಪೂರ್ತಿ ಕುಡಿದು ಹಲ್ಲೆ‌ ನಡೆಸಿ ಕೊಲೆ..!!

ದಾವಣಗೆರೆ: ಗ್ರಾಮ ದೇವತೆ ಜಾತ್ರೆ ದಿನವೇ ಪತ್ನಿಯನ್ನು ಪತಿಯೇ ಕೊಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ‌. ಕಂಠಪೂರ್ತಿ ಕುಡಿದ ಮತ್ತಿನಲ್ಲಿ ಹಲ್ಲೆ‌ ನಡೆಸಿ, ಪತ್ನಿಯನ್ನು ಕೊಲೆ ಮಾಡಿದ್ದಾನೆ.

ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಮೂರು ದಿನ ಗ್ರಾಮ ದೇವತೆ ಜಾತ್ರೆ ಇತ್ತು. ನಿನ್ನೆ (ಜ.31) ರಾತ್ರಿ‌ ಕಂಠಪೂರ್ತಿ ಕುಡಿದು ಮನೆಗೆ ಬಂದ ಪತಿ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಅರ್ಪಿತಾ (24) ಕೊಲೆಯಾದ ಪತ್ನಿ.‌ ಹನುಮಂತ (28) ಕೊಲೆ ಮಾಡಿದ ಆರೋಪಿ ಪತಿ ಆಗಿದ್ದಾನೆ.

ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದು, ಕಿವಿಯಲ್ಲಿ ರಕ್ತ ಬಂದು ಅರ್ಪಿತಾ ಸಾವನ್ನಪ್ಪಿದ್ದಾರೆ. ಐದು ವರ್ಷಗಳ ಬಳಿಕ ಬಂದ ಗ್ರಾಮದೇವತೆ ಹಬ್ಬಕ್ಕೆ ಮಾಂಸಾಹಾರದ ಊಟವನ್ನೂ ಮಾಡಲಾಗಿತ್ತು. ಜಾತ್ರೆ ಹಿನ್ನೆಲೆ ಕಂಠಪೂರ್ತಿ ಮದ್ಯಪಾನ ಮಾಡಿದ್ದ ಹನುಮಂತ, ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಆರಂಭಿಸಿದ್ದಾನೆ. ಆದರೆ, ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಹಲ್ಲೆ ಮಾಡಿದ್ದು, ಈಗ ಪತ್ನಿ ಸಾವನ್ನಪ್ಪಿದ್ದಾಳೆ.

ಕಳೆದೆರಡು ವರ್ಷದ ಹಿಂದೆ ಹನುಮಂತ ಮತ್ತು ಅರ್ಪಿತಾ ಮದುವೆಯಾಗಿತ್ತು. ಆರೋಪಿ ಹನುಮಂತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸ್ದಳಕ್ಕೆ ದಾವಣಗೆರೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top