ದಾವಣಗೆರೆ: ಫ್ರೀ ಬಸ್ ನಿಂದ ನಿಲ್ದಾಣದಲ್ಲಿ ನೂಕುನುಗ್ಗಲು; ಮಹಿಳೆಯ1.80 ಲಕ್ಷ ಮೌಲ್ಯದ ಮಾಂಗಲ್ಯ ಸರ ಎಗರಿಸಿದ ಕಳ್ಳರು…!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಫ್ರೀ ಬಸ್ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಲ್ಲಿ ನೂಕುನುಗ್ಗಲು ಉಂಟಾಗುತ್ತಿದೆ. ಇದೇ ಸಮಯ ಬಳಸಿಕೊಳ್ಳುತ್ತುರುವ ಕಳ್ಳರು, ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಬಸ್ ಹತ್ತಲು ಬಂದಿದ್ದ ಮಹಿಳೆಯೊಬ್ಬರ 1.80 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿದ ಘಟನೆ ಜಿಲ್ಲೆಯ ಹರಿಹರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಹರಿಹರ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹುಬ್ಬಳ್ಳಿಯ ಉಣಕಲ್ ನಿವಾಸಿ ಶೋಭಾ ಎಂಬುವವರು, 1.80 ಲಕ್ಷ ಮೌಲ್ಯದ 37 ಗ್ರಾಂ ತೂಕದ ಮಾಂಗಲ್ಯ ಸರ ಕಳೆದುಕೊಂಡವರಾಗಿದ್ದಾರೆ. ಪತಿ ಕೊಟ್ರೇಶ ಜತೆ ಶೋಭಾ, ಹುಬ್ಬಳ್ಳಿಯಿಂದ ಹೊನ್ನಾಳಿಯ ಹಿರೇಕಲ್ಮಠಕ್ಕೆ ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಪೂಜೆ ಸಲ್ಲಿಸಲು ಬಂದಿದ್ದರು. ವಾಪಸ್ ಊರಿಗೆ ಹೋಗುವಾಗ ಹರಿಹರ ಬಸ್‌ ನಿಲ್ದಾಣದಲ್ಲಿ ಬಸ್ ಬದಲಾವಣೆ ಮಾಡಿಕೊಳ್ಳುವಾಗ ಈ ಕಳ್ಳತನ ಆಗಿದೆ ಎಂದು ಪ ಹರಿಹರ ನಗರ ಠಾಣೆ ಪ್ರಕರಣ ದಾಖಲಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *