ದಾವಣಗೆರೆ: ಕಳ್ಳತನ ಮಾಡಲು ಬಂದಿದ್ದಾಗ ಮನೆ ಮಾಲೀಕ ಎಚ್ಚರಗೊಂಡಿದ್ದರಿಂದ ಕಳ್ಳನೊರ್ವ ಪಾರಾಗಲು ಹೋಗಿ ಮನೆ ಮೇಲಿಂದ ಹಾರಿ ಮೃತಪಟ್ಟ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.
ಕೆಟಿಜೆ ನಗರದ 3ನೇ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಪರಸಪ್ಪ (38) ಗುರುತಿಸಲಾಗಿದೆ. ಸಹಚರನೊಂದಿಗೆ ಕಳ್ಳತನ ಮಾಡಲು ಮನೆ ಹತ್ತಿದ್ದಾಗ ಮಾಲೀಕರಿಗೆ ಎಚ್ಚರವಾಗಿದೆ. ಮಾಲೀಕ ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದ ಮನೆಯವರು ಎಚ್ಚರವಾಗಿದ್ದಾರೆ. ಇದರಿಂದ ಭಯಗೊಂಡು ತಪ್ಪಿಸಿಕೊಳ್ಳಲು ಹೋಗಿ ಮನೆಯ ಮೇಲಿಂದ ಕೆಳಗೆ ಹಾರಿದ್ದಾನೆ. ಇದರಿಂದ ತೀವ್ರ ಪೆಟ್ಟಾಗಿದೆ. ಕೂಡಲೇ ಆತನನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಪ್ರಾಣ ಬಿಟ್ಟಿದ್ದಾನೆ. ಇನ್ನೋರ್ವ ಕಳ್ಳ ಸ್ಥಳದಿಂದ ಪಾರಾರಿ ಆಗಿದ್ದಾನೆ. ಈ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸರು, ಎಸ್ ಪಿ ಸಿ.ಬಿ.ರಿಷ್ಯಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



